ಕುಪ್ಮಾ ಒಕ್ಕೂಟ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

KannadaprabhaNewsNetwork |  
Published : Nov 11, 2025, 03:00 AM IST
32 | Kannada Prabha

ಸಾರಾಂಶ

ಕುಪ್ಮಾ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್‌ ಆಯ್ಕೆಯಾಗಿದ್ದಾರೆ.

ಕಾರ್ಕಳ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (ಕುಪ್ಮಾ) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್‌ ಆಯ್ಕೆಯಾಗಿದ್ದಾರೆ.

ಉಡುಪಿ ಓಶಿಯನ್‌ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್‌ ಸಂಸ್ಥೆಯ ಅಶ್ವತ್‌ ಎಸ್‌. ಎಲ್‌, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್‌ ಸಂಸ್ಥೆಯ ಡಾ. ಗಣನಾಥ್‌ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್‌ ಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಸುಜ್ಞಾನ ಸಂಸ್ಥೆಯ ರಮೇಶ್‌ ಶೆಟ್ಟಿ, ಎಕ್ಸಲೆಂಟ್‌ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್‌ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್‌ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷ ರಾಧಾಕೃಷ್ಣ ಶೆಣೈ, ಫಾದರ್‌ ವಿನ್ಸೆಂಟ್‌ ಕ್ರಾಸ್ತ, ಪ್ರೋ. ಆಲ್ಬಂಟ್‌ ರೋಡ್ರಿಗಸ್‌ (ದಂಡತೀರ್ಥ ಸಂಸ್ಥೆ) ನಾಗರಾಜ್‌ ಶೆಟ್ಟಿ (ಎಸ್‌ಆರ್‌ ಸಂಸ್ಥೆ ಹೆಬ್ರಿ), ಕೆಎಂಇಎಸ್‌ ಸಂಸ್ಥೆಯ ಇಮ್ತಿಯಾಜ್‌ ಭಾಗಿಯಾಗಿದ್ದರು.

ಸಮಿತಿಯ ನೂತನ ಪದಾಧಿಕಾರಿಗಳನ್ನು ಕುಪ್ಮಾ ರಾಜ್ಯ ಸಮಿತಿ ಅಧ್ಯಕ್ಷ ಡಾ. ಮೋಹನ್‌ ಆಳ್ವ ಹಾಗೂ ಕಾರ್ಯದರ್ಶಿ ನರೇಂದ್ರ ನಾಯಕ್‌ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ