ಬಸ್ಸಲ್ಲಿ ‘ವಾಂತಿ’ ನಾಟಕವಾಡಿ ಚಿನ್ನಾಭರಣ ದೋಚುವ ಕುಪ್ಪಂ ಗ್ಯಾಂಗ್ ಅರೆಸ್ಟ್

KannadaprabhaNewsNetwork |  
Published : May 08, 2026, 01:30 AM IST
ಫೋಟೋ: 7 ಹೆಚ್‌ಎಸ್‌ಕೆ 3 ಮತ್ತು 43: ಹೊಸಕೋಟೆ ಪೊಲೀಸರು ಬಂಧಿತರಿAದ ವಶಪಡಿಸಿಕೊಂಡಿರುವ ಹಣ ಹಾಗೂ ಒಡವೆಗಳು. | Kannada Prabha

ಸಾರಾಂಶ

ಹೊಸಕೋಟೆ: ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ‘ಕುಪ್ಪಂ ಗ್ಯಾಂಗ್’ನ ಕಿಡಿಗೇಡಿಗಳನ್ನು ಹೊಸಕೋಟೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಕಳ್ಳತನಕ್ಕಾಗಿ ಮಕ್ಕಳನ್ನೇ ದಾಳವಾಗಿ ಬಳಸಿಕೊಳ್ಳುತ್ತಿದ್ದ ಈ ತಂಡವೀಗ ಪೊಲೀಸರ ಅತಿಥಿಯಾಗಿದ್ದಾರೆ

ಹೊಸಕೋಟೆ: ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ‘ಕುಪ್ಪಂ ಗ್ಯಾಂಗ್’ನ ಕಿಡಿಗೇಡಿಗಳನ್ನು ಹೊಸಕೋಟೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಕಳ್ಳತನಕ್ಕಾಗಿ ಮಕ್ಕಳನ್ನೇ ದಾಳವಾಗಿ ಬಳಸಿಕೊಳ್ಳುತ್ತಿದ್ದ ಈ ತಂಡವೀಗ ಪೊಲೀಸರ ಅತಿಥಿಯಾಗಿದ್ದಾರೆ.

ದಿವಾಕರ್ ಬಂಧಿತ. ತಂಡದ ಇತರ ಸದಸ್ಯರಾದ ಮೋನಿಷಾ, ಗಾಯತ್ರಿ ಮತ್ತು ಇಂದ್ರಾಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತಂಡದ ಸದಸ್ಯರು ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಇವರ ಕಳ್ಳತನದ ಶೈಲಿ ವಿಭಿನ್ನವಾಗಿತ್ತು.

ಬಸ್ಸಿನಲ್ಲಿ ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ ಈ ಗ್ಯಾಂಗ್, ಜನನಿಬಿಡ ಸಂದರ್ಭದಲ್ಲಿ ಮಕ್ಕಳಿಗೆ ವಾಂತಿ ಬರುತ್ತಿದೆ ಎಂದು ನಾಟಕ ಮಾಡುತ್ತಿದ್ದರು. ವಾಂತಿ ಮಾಡುತ್ತಿರುವ ಮಗುವನ್ನು ಕಂಡು ಪ್ರಯಾಣಿಕರು ಅಯ್ಯೋ ಎನ್ನುತ್ತಾ ಸಹಾಯಕ್ಕೆ ಮುಂದಾದಾಗ ಅಥವಾ ಗಮನ ಬೇರೆಡೆ ಹರಿಸಿದಾಗ, ಅದೇ ಸಮಯವನ್ನು ಬಳಸಿಕೊಂಡು ಅವರ ಬಳಿಯಿರುವ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದರು.

ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಯೊಬ್ಬರ ಗಮನ ಬೇರೆಡೆ ಸೆಳೆದಿದ್ದ ಈ ಖದೀಮರು, ಅವರ ಕೊರಳಿನಲ್ಲಿದ್ದ 74 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ದಾಖಲಾದ ದೂರಿನನ್ವಯ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಬಂಧಿತನಿಂದ 12 ಲಕ್ಷ ಮೌಲ್ಯದ ಚಿನ್ನಾಭರಣ, ೩.೫೦ ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಫೋಟೋ: 7 ಹೆಚ್‌ಎಸ್‌ಕೆ 3 ಮತ್ತು 4

3: ಹೊಸಕೋಟೆ ಪೊಲೀಸರು ಬಂಧಿತರಿಂದ ವಶಪಡಿಸಿಕೊಂಡಿರುವ ಹಣ ಹಾಗೂ ಒಡವೆಗಳು.

4: ಹೊಸಕೋಟೆ ಪೊಲೀಸರು ಬಂಧಿತ ಆರೋಪಿಯೊಂದಿಗೆ ಸ್ಥಳ ಮಹಜರು ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಗ್ಗೂಡಿಸುವ ಕೆಲಸ ಮಾಡುವ ಗ್ರಾಮ ಅರಣ್ಯ ಸಮಿತಿಗಳು: ಎಂ.ಪಿ.ಆದರ್ಶ
ನಾಡಿನಾದ್ಯಂತ ಜೆಡಿಎಸ್‌ಗೆ ಶಕ್ತಿ: ನಿಖಿಲ್ ಕುಮಾರಸ್ವಾಮಿ