ಕುರುಗೋಡು ಪಟ್ಟಣಕ್ಕೆ ಮೂಲಭೂತ ಸೌಕರ್ಯ ಒದಗಿಸಿ

KannadaprabhaNewsNetwork |  
Published : Jan 20, 2026, 02:45 AM IST
ಕುರುಗೋಡು ಪಟ್ಟಣದ ಪುರಸಭೆಯಲ್ಲಿ ಶನಿವಾರ ಬಜೆಟ್ ಪೂರ್ವಭಾವಿ ಸಭೆ ನಡೆಯಿತು. ಅಧ್ಯಕ್ಷ ಟಿ ಶೇಖಣ್ಣ,  ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ  | Kannada Prabha

ಸಾರಾಂಶ

ಮೂಲಸೌಲಭ್ಯ ದೊರೆಯದೇ ಜನರು ರೋಸಿ ಹೋಗಿದ್ದಾರೆ ಎಂದು ಸದಸ್ಯರು ಪುರಸಭೆಯಲ್ಲಿ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕುರುಗೋಡು: ಪಟ್ಟಣದ ಕಳೆದ ಬಾರಿಯ ಆಯ-ವ್ಯಯವೇ ಸಮರ್ಪಕವಾಗಿ ಅನುಷ್ಟಾನಗೊಂಡಿಲ್ಲ. ಮೂಲಸೌಲಭ್ಯ ದೊರೆಯದೇ ಜನರು ರೋಸಿ ಹೋಗಿದ್ದಾರೆ ಎಂದು ಸದಸ್ಯರು ಪುರಸಭೆಯಲ್ಲಿ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ನೀರು ಪೂರೈಕೆಗಾಗಿ ಅಗೆದಿರುವ ರಸ್ತೆ ಸಮರ್ಪಕವಾಗಿ ಮುಚ್ಚಿಲ್ಲ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದ ವಾಹನ ಸವಾರರಿಗೆ ನಿತ್ಯ ಅಭಿಷೇಕವಾಗುತ್ತಿದೆ. ಮಾಂಸ ಮಾರುಕಟ್ಟೆ ಸ್ಥಳಾಂತರ, ವಿದ್ಯುತ್ ಕಂಬ ದುರಸ್ತಿಯಾಗಿಲ್ಲ. ಬೀದಿನಾಯಿ, ಕೋತಿ, ಬಿಡಾಡಿ ದನದ ಹಾವಳಿ ಬಗ್ಗೆ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಜನರು ಕೇಳುವ ಪ್ರಶ್ನೆಗೆ ಉತ್ತರಿಸುವುದು ಕಷ್ಟವಾಗುತ್ತಿದೆ ಎಂದು ೨೨ನೇ ವಾರ್ಡ್ ಸದಸ್ಯ ವಿ. ವಿರೇಶ ತಮ್ಮ ಅಸಹಾಯಕತೆ ಹೊರಹಾಕಿದರು.

ಮುಖ್ಯವೃತ್ತದ ಸುತ್ತಮುತ್ತ ವರ್ತಕರು ಕೊಳೆತ ಹಣ್ಣು ಮತ್ತು ತರಕಾರಿ ಬೀದಿಗೆ ಬಿಸಾಡುತ್ತಿದ್ದಾರೆ. ಇದರಿಂದ ವಾತಾವರಣ ಕಲುಷಿತಗೊಳ್ಳುವ ಜತೆಗೆ ಬಿಡಾಡಿ ದನ ಮುಗಿಬೀಳುತ್ತಿವೆ. ಹೀಗಿದ್ದರೂ ಪುರಸಭೆ ಸಿಬ್ಬಂದಿ ಅವರ ವಿರುದ್ಧ ಕ್ರಮ ಜರುಗಿಸದೇ ಮೌನ ವಹಿಸಿರುವುದು ಏಕೆ? ಎಂದು ಸದಸ್ಯ ಮಂಜುನಾಥ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪುರಸಭೆ ಅಧ್ಯಕ್ಷ ಶೇಖಣ್ಣ, ನಿತ್ಯ ಬೆಳಿಗ್ಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸಿ ಎಂದು ಆರೋಗ್ಯ ನಿರೀಕ್ಷಕರಿಗೆ ಸೂಚಿಸಿದರು.

ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಪ್ರತಿಕ್ರಿಯಿಸಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳು ಸಲ್ಲಿಸುವ ಬಜೆಟ್ ಆಧಾರದಲ್ಲಿ ರಾಜ್ಯ ಸರ್ಕಾರ ಬಜೆಟ್ ತಯಾರಿಸುತ್ತದೆ. ಸರ್ಕಾರ ದಿಂದ ದೊರೆಯುವ ಅನುದಾನ ಮತ್ತು ಪುರಸಭೆಯ ವಿವಿಧ ಮೂಲಗಳಿಂದ ಬರುವ ಆದಾಯದ ಆಧಾರದ ಮೇಲೆ ಪ್ರತಿ ವರ್ಷ ಬಜೆಟ್ ತಯಾರಿಸಬೇಕು ಎನ್ನುವ ನಿಯಮವಿದೆ. ಅಗತ್ಯ ಕಾಮಗಾರಿ ಬಗ್ಗೆ ಮಾಹಿತಿ ನೀಡಿ ಈ ವರ್ಷದ ಬಜೆಟ್ ನಲ್ಲಿ ಅಳವಡಿಸಿ ಎಲ್ಲರೂ ಸೇರಿ ಅನುಷ್ಟಾನಗೊಳಿಸೋಣ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ
ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?