ಕನ್ನಡಪ್ರಭ ವಾರ್ತೆ ಕುಶಾಲನಗರ
ರಾಮೋತ್ಸವ ಅಂಗವಾಗಿ ಪ್ರತಿದಿನ ಬೆಳಗ್ಗೆ ಗಣಪತಿ ಪೂಜೆ, ನವಗ್ರಹ ಮೃತ್ಯುಂಜಯ ಪೂಜೆ ಮತ್ತು ಶ್ರೀರಾಮ ದೇವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿಶೇಷ ಕಾರ್ಯಕ್ರಮಗಳು, ಸೇವೆಗಳು ನಡೆಯಲಿವೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.
ಪೂಜಾ ಕಾರ್ಯಕ್ರಮಗಳು ಕೆ.ಕೆ. ಸುಬ್ಬರಾಮ ಪುರೋಹಿತರ ನೇತೃತ್ವದಲ್ಲಿ ನಡೆಯುವುದು.ಕುಶಾಲನಗರ ರಥ ಬೀದಿಯಲ್ಲಿರುವ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡದಲ್ಲಿ ಬುಧವಾರ ಸಂಜೆ ವಿಪ್ರ ಮಹಿಳೆಯರಿಂದ ವಿವಿಧ ವಿನೋದಾವಳಿ ಕಾರ್ಯಕ್ರಮ, 18ರಂದು ವಿಪ್ರ ಬಾಲಕ ಬಾಲಕಿಯರಿಂದ ಕಾರ್ಯಕ್ರಮ, 19ರಂದು ಮಾತು ಮಂಥನ, 20ರಂದು ವಿಭಿನ್ನ ನೃತ್ಯ ಸಮುಚ್ಚಯ ಕಾರ್ಯಕ್ರಮ, 21ರಂದು ಸೀತಾ ಕಲ್ಯಾಣ, ಸಂಜೆ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
24ರಂದು ಸಂಜೆ ವಿಪ್ರ ಮಹನೀಯರಿಂದ ವಿವಿಧ ವಿನೋದಾವಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
25ರಂದು ಶ್ರೀ ರಾಮ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯುವುದು ಸಂಜೆ ಮಾಲಿನಿ ಅಯ್ಯರ್ ಅವರಿಂದ ಹರಿಕಥೆ ಕಾರ್ಯಕ್ರಮ ಜರಗಲಿದೆ.26ರಂದು ಹನುಮಂತೋತ್ಸವ ಕಾರ್ಯಕ್ರಮ, ಸಂಜೆ ಆರು ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಶ್ರೀ ರಾಮ ಸೇವಾ ಸಮಿತಿ ಮತ್ತು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಪ್ರಕಟಣೆ ತಿಳಿಸಿದೆ.