ಕನ್ನಡಪ್ರಭ ವಾರ್ತೆ ಕುಶಾಲನಗರ
ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ನಡೆದ 167ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪುರಸಭೆ ವತಿಯಿಂದ ಈಗಾಗಲೇ ಪಟ್ಟಣ ವಿವಿಧ ಬಡಾವಣೆಗಳಲ್ಲಿ ನೇರವಾಗಿ ನದಿಗೆ ಸೇರುತ್ತಿದ್ದ ಕಲುಷಿತ ನೀರನ್ನು ನೈಸರ್ಗಿಕವಾಗಿ ಯುಜಿಡಿ ಕೊಳವೆಗಳ ಮೂಲಕ ಹಾಯಿಸಿ ನದಿ ನೇರವಾಗಿ ಕಲುಷಿತಗೊಳ್ಳುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದಿನ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಈಗಿನ ಶಾಸಕ ಡಾ.ಮಂತರ್ ಗೌಡ, ಒಳಚರಂಡಿ ಯೋಜನೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು, ಸದ್ಯದಲ್ಲೇ ಯೋಜನೆ ಪೂರ್ಣಗೊಂಡು ನದಿ ಕಲುಷಿತ ಮತ್ತು ಪಟ್ಟಣದ ಸ್ವಚ್ಛತೆಯ ಗುರಿ ಸಾಧನೆ ಸಾಧ್ಯವಾಗಲಿದೆ ಎಂದರು.ನಿರಂತರವಾಗಿ ಜೀವನದಿ ಕಾವೇರಿಗೆ ಆರತಿ ಬೆಳಗುವ ಮೂಲಕ ಜನಜಾಗೃತಿ ಮೂಡಿಸುತ್ತಿರುವ ಆರತಿ ಬಳಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಆರತಿ ಕಟ್ಟೆ ನಿರ್ಮಾಣ, ಅನ್ನದಾಸೋಹ ಭವನ ನಿರ್ಮಾಣ ಹಾಗೂ ಗಣಪತಿ ಮೂರ್ತಿಗಳ ವಿಸರ್ಜನೆ ಮಾಡುವ ನಿಟ್ಟಿನಲ್ಲಿ ಶಾಶ್ವತ ಕೆರೆ ನಿರ್ಮಿಸಲು ಕೂಡ ಪುರಸಭೆಯಿಂದ ಚಿಂತನೆ ಹರಿಸಲಾಗಿದೆ ಎಂದು ತಿಳಿಸಿದರು.
ಕಾವೇರಿ ನದಿ ಸ್ವಚ್ಛತಾ ಅಭಿಯಾನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪ್ರಸ್ತಾವಿಕವಾಗಿ ಮಾತನಾಡಿದರು.
ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಡಿ.ಆರ್. ಸೋಮಶೇಖರ್, ಚಂದ್ರು, ಶ್ರೀನಿವಾಸ್, ಶಂಕರ್ ವೇಣುಗೋಪಾಲ್, ಚೈತನ್ಯ, ಧರಣಿ ಸೋಮಯ್ಯ ಬಳಗದ ಸದಸ್ಯರು ಮತ್ತು ಅಯ್ಯಪ್ಪ ಸ್ವಾಮಿ ವ್ರತಧಾರಿಗಳು ಇದ್ದರು.