ಕುಶಾಲನಗರ: ಜೀವನದಿ ಕಾವೇರಿ ಸೇರಿದಂತೆ ರಾಜ್ಯದ ಬಹುತೇಕ ನದಿಗಳು ನೇರವಾಗಿ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಳಗದ ಜಿಲ್ಲಾಧ್ಯಕ್ಷ ದೀಪಕ್ ಕನ್ನಡಿಗ ಹೇಳಿದರು.ಅವರು ಕುಶಾಲನಗರದಲ್ಲಿ ಹುಣ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ 179ನೇ ಮಹಾಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾವೇರಿ ನದಿ ಸ್ವಚ್ಛತಾ ಅಭಿಯಾನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರಾದ ಸಂಧ್ಯಾ ಗಣೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ವಸಂತ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಶೃತಿ, ಯುವ ಘಟಕದ ಜಿಲ್ಲಾ ಪ್ರಮುಖರಾದ ಪರಮೇಶ್, ನಗರಾಧ್ಯಕ್ಷರಾದ ರೇಣುಕಾ, ಯುವ ಘಟಕದ ಉಪಾಧ್ಯಕ್ಷ ಪುನೀತ್, ತುಳಸಿ, ದೀಪು, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಅಣ್ಣಯ್ಯ, ಧರಣಿ, ಫಯಾಜ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸುಬೇದಾರ್ ಮೇಜರ್ ಎಸ್.ಆರ್. ಮಾದಪ್ಪ, ಉಪಾಧ್ಯಕ್ಷರಾದ ಸುಬೇದಾರ್ ಎಳ್ತಂಡ ರಂಜಿತ್, ಕರುಂಬಯ್ಯ ಮತ್ತು ಬಳಗದ ಸದಸ್ಯರು ಇದ್ದರು.ಇದೇ ಸಂದರ್ಭ ಭಾಗಮಂಡಲದಿಂದ ರಾಮನಾಥಪುರ ತನಕ ವಿವಿಧೆಡೆ ನದಿ ತಟಗಳಲ್ಲಿ ನಮಾಮಿ ಕಾವೇರಿ ಬಳಗದಿಂದ ಏಕಕಾಲದಲ್ಲಿ ಜೀವನದಿಗೆ ಮಹಾ ಆರತಿ ಕಾರ್ಯಕ್ರಮಗಳು ನಡೆದವು.ಹುಣ್ಣಿಮೆ ಅಂಗವಾಗಿ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಅಭಿಷೇಕ ಮಾಡಲಾಯಿತು. ಕನ್ನಡ ಸಂಘದ ಪ್ರಮುಖರಾದ ಬಬೀಂದ್ರಪ್ರಸಾದ್, ರವೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಮತ್ತಿತರರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.