ಮಡಿಕೇರಿ: ಶಾಲಾ ಪ್ರಾರಂಭೋತ್ಸವ ಸಂಭ್ರಮ

KannadaprabhaNewsNetwork |  
Published : Jun 02, 2026, 03:00 AM IST
ಚಿತ್ರ :  1ಎಂಡಿಕೆ4 : ಶಾಲಾ ಪ್ರಾರಂಭೋತ್ಸವದಲ್ಲಿ ಪುಸ್ತಕ ವಿತರಿಸಲಾಯಿತು.  | Kannada Prabha

ಸಾರಾಂಶ

ಹೂಗುಚ್ಛ ಮತ್ತು ಸಿಹಿಯನ್ನು ನೀಡುವುದರೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.

ಮಡಿಕೇರಿ: ಹೂಗುಚ್ಛ ಮತ್ತು ಸಿಹಿಯನ್ನು ನೀಡುವುದರೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ಮಡಿಕೇರಿ ಪಿಎಂಶ್ರೀ ಶಾಲೆ ವತಿಯಿಂದ ಸೋಮವಾರ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹೂಗುಚ್ಛ ಮತ್ತು ಸಿಹಿಯನ್ನು ವಿತರಿಸುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು.

ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಸರ್ಕಾರಿ ಶಾಲೆಗೆ ಬರುವುದರಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ತಿಳಿಸಿದರು.ಹಾಗೆಯೇ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮಾಡಿದಾಗ ವಿದ್ಯಾರ್ಥಿಗಳು ತುಂಬಾ ಸಂತಸದಿಂದ ಶಾಲೆಗೆ ಬಂದಿದ್ದೇವೆ ಎಂಬ ಮಾತನ್ನು ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಎಸ್ಡಿಎಂಸಿ ಅಧ್ಯಕ್ಷರಾದ ಜಗದೀಶ್, ಶಾಲಾ ಮುಖ್ಯೋಪಾಧ್ಯಾಯನಿ ಭವಾನಿ, ಉಪ ನಿರ್ದೇಶಕರ ಕಚೇರಿಯ ಡಿಪಿಇಒ ಶ್ರೀನಿವಾಸ್, ಡಿವೈಪಿಸಿ ಕೃಷ್ಣಪ್ಪ, ವಿಷಯ ಪರಿವೀಕ್ಷಕರಾದ ಬಿಂದು, ಕ್ಷೇತ್ರ ಸಮನ್ವಯ ಅಧಿಕಾರಿ ಶರ್ಮಿಳ, ಡಾ.ಸದಾಶಿವಯ್ಯ ಎಸ್ ಪಲ್ಲೆದ್, ಶಾಲಾ ಶಿಕ್ಷಕರು ಮತ್ತು ಪೋಷಕರು ಒಳಗೊಂಡಂತೆ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೂ ಒತ್ತು; ದಯಾನಂದ ಪೈ
ಶಿಕ್ಷಕರನ್ನೇ ಆತ್ಮೀಯವಾಗಿ ಸ್ವಾಗತಿಸಿ ಹೊಸ ಶೈಕ್ಷಣಿಕ ವರ್ಷದ ಸಂಭ್ರಮ!