ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.ವಿವೇಕಾನಂದ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಶಿಬಿರ ಉದ್ಘಾಟಿಸಿ ಮಾತನಾಡಿದರು.ಜೆಸಿಐ ಮಾಜಿ ಅಧ್ಯಕ್ಷ ರಜನೀಕಾಂತ್ ಮಾತನಾಡಿ, ರಕ್ತದಾನ ಶಿಬಿರಗಳಲ್ಲಿ ಸ್ವಯಂಪ್ರೇರಿತರಾಗಿ ಸಾರ್ವಜನಿಕರ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ರಕ್ತದ ಕೊರತೆ ನೀಗಿಸಲು ಕರೆ ನೀಡಿದರು.
ಈ ಸಂದರ್ಭ ಕುಶಾಲನಗರ ಜೆಸಿಐ ಅಧ್ಯಕ್ಷ ಶ್ರೀನಿವಾಸ್, ಪ್ರಾಜೆಕ್ಟ್ ಡೈರೆಕ್ಟರ್ ಜಗದೀಶ್, ಮಾಜಿ ಅಧ್ಯಕ್ಷರಾದ ತೇಜಾ ದಿನೇಶ್, ಅಳಿಲು ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಜಿ.ಮನು, ಪ್ರಮುಖರಾದ ಎಂ.ಡಿ.ಕೃಷ್ಣಪ್ಪ, ಹೆಚ್.ಡಿ. ಶಿವಾಜಿ, ಶನಿವಾರಸಂತೆ ಜೆಸಿಐ ಅಧ್ಯಕ್ಷ ರವಿ, ಕಾರ್ಯದರ್ಶಿ ಪ್ರತಾಪ್, ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಗೌಡ, ಜಿಲ್ಲಾ ರಕ್ತನಿಧಿ ಘಟಕದ ಡಾ.ಕರುಂಬಯ್ಯ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.