ಕುತ್ಲೂರು: ಮುರಿದ ಸೇತುವೆ ಮೇಲೆ ಪ್ರತಿಭಟನೆ, ದುರಸ್ತಿಗೆ ಆಗ್ರಹ

KannadaprabhaNewsNetwork |  
Published : Oct 30, 2024, 12:31 AM ISTUpdated : Oct 30, 2024, 12:32 AM IST
11 | Kannada Prabha

ಸಾರಾಂಶ

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸ್ಥಳೀಯ ಗ್ರಮಾಪಂಚಾಯಿತಿ ಸದಸ್ಯೆ ಯಶೋದಾ ಹಾಗೂ ಇತರರು, ಆಗಮಿಸಿ ಸಮಸ್ಯೆಯ ತೀವ್ರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಕುತ್ಲೂರು ಗ್ರಾಮದ ಅಲಂಬಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳಾದರೂ ಸೇತುವೆ ದುರಸ್ತಿ ಅಥವಾ ಹೊಸ ಸೇತುವೆಯ ನಿರ್ಮಾಣ ಮಾಡದಿರುವುದನ್ನು ಖಂಡಿಸಿ, ಕುತ್ಲೂರಿನ ಮುರಿದ ಸೇತುವೆಯ ಮೇಲೆ ಈ ಸೇತುವೆಯನ್ನು ಅವಲಂಬಿಸಿರುವ ಆದಿವಾಸಿಗಳು ಹಾಗೂ ಸ್ಥಳೀಯರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ, ಆದಿವಾಸಿಗಳು ಸೇರಿದಂತೆ ನೂರಾರು ಜನರು ಪ್ರತಿನಿತ್ಯ ಉಪಯೋಗಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳೇ ಕಳೆದರೂ ಇನ್ನೂ ಅಧಿಕಾರಿಗಳು, ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು.

ಸರ್ಕಾರ, ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡ‌ ಸೇತುವೆಯ ಮರು ಮಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಾರಾವಿ ಗ್ರಾಮ ಪಂಚಾಯಿತಿ ಮುಂಭಾಗ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿ.ಪಿ.ಐ.ಎಂ ತಾಲೂಕು ಕಾರ್ಯದರ್ಶಿ ಬಿ‌.ಎಂ. ಭಟ್ ಕುತ್ಲೂರಿನ ಅಲಂಬ ಪರಿಸರದ ಜನತೆ ಕಳೆದ ಎರಡು ವರ್ಷಗಳಿಂದ ಸೇತುವೆ ಕುಸಿದ ಕಾರಣ ಸಮಸ್ಯೆ ಎದುರಿಸುತ್ತಿದ್ದಾರೆ, ಆದರೆ ಯಾವ ಅಧಿಕಾರಿಗಳು ಜನಪ್ರತಿನಿಧಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಈ ಹಿನ್ನಲೆಯಲ್ಲಿ ಇದೀಗ ಹೋರಾಟದ ಹಾದಿಯನ್ನು ಹಿಡಿಯಬೇಕಾದ ಅನಿವಾರ್ಯತೆ ಬಂದಿದೆ ಎಂದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಂಚಾಯತಿ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಎಂಜಿನಿಯರ್ ಹರ್ಷಿತ್ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಈಗಾಗಲೇ ಸೇತುವೆಗೆ 1.90 ಕೋಟಿ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಮಳೆಹಾನಿಯಲ್ಲಿಯೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಹೋರಾಟಗಾರರು ತಮ್ಮ ಅಳಂಬ ಪರಿಸರದ ತಮ್ಮ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಿದರು. ಹೋರಾಟಗಾರರಿಂದ ಮನವಿ ಸ್ವೀಕರಿಸಿದ ಅಧಿಕಾರಿಗಳು ತಮ್ಮ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸ್ಥಳೀಯ ಗ್ರಮಾಪಂಚಾಯಿತಿ ಸದಸ್ಯೆ ಯಶೋದಾ ಹಾಗೂ ಇತರರು, ಆಗಮಿಸಿ ಸಮಸ್ಯೆಯ ತೀವ್ರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.ಪ್ರತಿಭಟನೆಯ ನೇತೃತ್ವವನ್ನು ದಲಿತ ಹಕ್ಕುಗಳ ಹೋರಾಟ ಸಮಿತಿಯ ಮುಖಂಡರಾದ ಸುಕುಮಾರ ದಿಡುಪೆ, ಪೂವಪ್ಪ ಮಲೆಕುಡಿಯ ಕುತ್ಲೂರು, ಈಶ್ವರಿ, ಸುಧಾಕರ ಮಲೆಕುಡಿಯ, ಶಶಿಧರ, ಚೀಂಕ್ರ, ಸುಜಾತ, ಜಯಶ್ರೀ, ಜಯರಾಮ‌ ಮಯ್ಯ ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!