ಜಿಲ್ಲಾಸ್ಪತ್ರೆ ಉದ್ಘಾಟಿಸದಿದ್ದರೆ ಉಗ್ರ ಪ್ರತಿಭಟನೆ: ಕುತ್ಯಾರು ಎಚ್ಚರಿಕೆ

KannadaprabhaNewsNetwork |  
Published : Apr 08, 2026, 03:45 AM IST
ಜಿಲ್ಲಾ ಬಿಜೆಪಿ ವತಿಯಿಂದ ಸುದ್ದಿಗೋಷ್ಠಿ ನಡೆಯಿತು | Kannada Prabha

ಸಾರಾಂಶ

ಅಜ್ಜರಕಾಡುನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿ 5 ವರ್ಷ ಕಳೆದಿದ್ದರೂ ಸರ್ಕಾರದ ನಿರ್ಲಕ್ಷದಿಂದ ಇನ್ನೂ ಉದ್ಘಾಟನೆಗೊಂಡಿಲ್ಲ. ಇನ್ನು 25-20 ದಿನಗಳೊಳಗೆ ಅದರ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡಿ ಬಡ ಜನರ ಉಪಯೋಗಕ್ಕೆ ಲಭ್ಯವಾಗುವಂತೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉಡುಪಿ: ಅಜ್ಜರಕಾಡುನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿ 5 ವರ್ಷ ಕಳೆದಿದ್ದರೂ ಸರ್ಕಾರದ ನಿರ್ಲಕ್ಷದಿಂದ ಇನ್ನೂ ಉದ್ಘಾಟನೆಗೊಂಡಿಲ್ಲ. ಇನ್ನು 25-20 ದಿನಗಳೊಳಗೆ ಅದರ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡಿ ಬಡ ಜನರ ಉಪಯೋಗಕ್ಕೆ ಲಭ್ಯವಾಗುವಂತೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇನ್ನೂ ತಾಲೂಕ ಆಸ್ಪತ್ರೆಯ ಹಂತದಲ್ಲಿಯೇ ಇರುವ ಈಗಿನ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆ ದರ್ಜೆಗೇರಿಸಲು ಬಿಜೆಪಿ ಸರ್ಕಾರದ ಆಡಳಿತದಲ್ಲಿ 2021ರಿಂದ ನೂತನ ಕಟ್ಟಡ ಕಾಮಗಾರಿ ಆರಂಭಿಸಲಾಗಿದೆ. ಶೇ. 90ರಷ್ಟು ಕಾಮಗಾರಿ 3 ವರ್ಷಗಳ ಹಿಂದೆ ಪೂರ್ಣವಾಗಿದ್ದರೂ, ಅದನ್ನು ಜನರ ಬಳಕೆಗೆ ಮುಕ್ತ ಮಾಡುವ ಇಚ್ಛಾಶಕ್ತಿ ಈಗಿನ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಅವರು ಆರೋಪಿಸಿದರು. ಉಡುಪಿ ಜಿಲ್ಲೆಗೆ 25 ವರ್ಷ ಕಳೆದರೂ ಇನ್ನೂ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ ೧೨೦ ಹಾಸಿಗೆಗಳಿವೆ. ರೋಗಿಗಳು ಹಾಸಿಗೆಗಾಗಿ, ಐಸಿಯುಗಾಗಿ ಕಾಯುವ ಪರಿಸ್ಥಿತಿ ಇದೆ. ಇನ್ನಾದರೂ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ, ಅಗತ್ಯ ಉಪಕರಣ ಖರೀದಿಗೆ ಸೂಕ್ತ ಅನುದಾನ ಒದಗಿಸಬೇಕು. ವೈದ್ಯರು, ಸಿಬ್ಬಂದಿ ಹುದ್ದೆ ಭರ್ತಿಗೆ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಬಡವರ ಬದುಕಲ್ಲಿ ಚೆಲ್ಲಾಟ: ಯಶಪಾಲ್ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿಕ್ಕು ದೆಸೆ ಇಲ್ಲದ ದುರಾಡಳಿತ, ಆಡಳಿತ ವೈಫಲ್ಯದಿಂದ ಜನ ಸಾಮಾನ್ಯರ ಗೋಳು ಕೇಳುವವರಿಲ್ಲದಂತಾಗಿದೆ. ರಾಜ್ಯ ಸರಕಾರ ಬಡವರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ದಾಖಲೆಗಳ ಕೊರತೆ, ಡೀಮ್ಡ್ ಫಾರೆಸ್ಟ್, ಕುಮ್ಕಿ ಮತ್ತಿತರ ನೆಪ ಹೇಳಿ, ಹಕ್ಕುಪತ್ರ ನೀಡದೆ ಬಡ ಕುಟುಂಬಗಳನ್ನ ನಡು ದಾರಿಯಲ್ಲಿ ಕೈ ಬಿಡಲಾಗುತ್ತಿದೆ. ರಾಜ್ಯ ಸರ್ಕಾರ 3 ವರ್ಷಗಳಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ನೀಡುತ್ತಿಲ್ಲ. ಬಡವರಿಗೆ ನಿವೇಶನವೂ ಮೂರು ವರ್ಷದಿಂದ ಸಿಗುತ್ತಿಲ್ಲ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಆಯುಕ್ತರ ನಡುವೆ ಹೊಂದಾಣಿಕೆ ಇಲ್ಲ. ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಯಶಪಾಲ್ ಸುವರ್ಣ ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕಲ್ಯಾ ದಿವಾಕರ ಶೆಟ್ಟಿ, ಕಾರ್‍ಯದರ್ಶಿ ಶ್ರೀನಿ ಹೆಗ್ಡೆ, ಕಚೇರಿ ಕಾರ್‍ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಕಳಕಳಿಯ ಕಾರಣಕ್ಕೆ ‘ಬಾಬೂಜಿ’ಯಾದ ಡಾ. ಬಾಬು ಜಗಜೀವನ್ ರಾಂ: ಪ್ರೊ. ಎಂ.ಡಿ.ಮಂಚಿ
ಉಡುಪಿ: 12 ರಂದು ಕಥಾಬಿಂದು ಸಾಹಿತ್ಯ ಸಮ್ಮೇಳನ