ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ವತಿಯಿಂದ ಕುವೆಂಪುರವರ 121ನೇ ಜನ್ಮದಿನ ಹಾಗೂ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವಕ್ಕೇ ಸಂದೇಶ:
ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರವಾಗಿ ಉಳಿದರು. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು. ಕಸಾಪ ತಾಲೂಕು ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಪರೀಕ್ಷೆಯಲ್ಲಿ ಆಯ್ಕೆಯಾದ ಆರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳನ್ನು ನೀಡಲಾಯಿತು.ಈ ವೇಳೆ ಕಸಾಪ ತಾಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ಗ್ರೇಡ್ 2 ತಹಸಿಲ್ದಾರ್ ಮಂಜುನಾಥ್, ಇಸಿಓ ಮಂಜುನಾಥ್, ಕಸಾಪ ತಾಲೂಕು ಗೌರವಾಧ್ಯಕ್ಷ ಎನ್ ಸುಂದರ್, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಒಕ್ಕಲಿಗ ಸಂಘದ ಯುವ ಅಧ್ಯಕ್ಷ ವೆಂಕಟಸ್ವಾಮಿ ಮತ್ತಿತರರು ಇದ್ದರು.