ಕನ್ನಡಪ್ರಭ ವಾರ್ತೆ ಮೈಸೂರು
ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ಶುಕ್ರವಾರ ಮಾನಸ ಗಂಗೋತ್ರಿ ಮಹಾದ್ವಾರದ ಎದುರು ಏರ್ಪಡಿಸಿದ್ದ ಕುವೆಂಪು ಜನ್ಮದಿನ ಕಾರ್ಯಕ್ರಮದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಮಾನಸ ಗಂಗೋತ್ರಿ ಕ್ಯಾಂಪಸ್ ಬರಲು ಕುವೆಂಪು ಅವರೇ ಕಾರಣ. ಹೀಗಾಗಿ ಯಾವತ್ತೂ ಅವರನ್ನು ಮರೆಯಲಾಗದು ಎಂದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಡಿ.29 ರಂದು ಕುವೆಂಪು ಅವರ ಜನ್ಮದಿನವನ್ನು ಆಚರಿಸಲಾಗಲಿಲ್ಲ. ಹೀಗಾಗಿ ಜ.8 ರಂದು ವಿಶ್ವವಿದ್ಯಾನಿಲಯ ವತಿಯಿಂದ ಕುವೆಂಪು ಜನ್ಮದಿನವನ್ನು ಆಯೋಜಿಸಲಾಗಿದೆ ಎಂದರು.ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ಮೂಲಕ ಕನ್ನಡವನ್ನು ಎತ್ತರಕ್ಕೆ ಬೆಳೆಸಿದ್ದಾರೆ. ವಿಶ್ವಮಾನವ ಸಂದೇಶವನ್ನು ಕೂಡ ನೀಡಿದ್ದಾರೆ. ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ನಾವು ಗೌರವ ಸಲ್ಲಿಸಬೇಕು ಎಂದರು.
ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ವೈಚಾರಿಕತೆಯನ್ನು ಪ್ರತಿಪಾದಿಸಿದ್ದಾರೆ. ಸ್ವಾತಂತ್ರ್ಯಪೂರ್ವದಲ್ಲಿಯೇ ವೈಚಾರಿಕ ಚಿಂತನೆಗಳನ್ನು ಜನರಲ್ಲಿ ಬಿತ್ತುವ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಸಾಹಿತ್ಯ ಸದಾಕಾಲಕ್ಕೂ ಪ್ರಸ್ತುತವಾಗಿರುತ್ತದೆ ಎಂದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಹಲವಾರು ಪ್ರಥಮಗಳಿಗೆ ಕುವೆಂಪು ಅವರು ಕಾರಣರಾಗಿದ್ದಾರೆ. ಅವರು ಶ್ರೀರಾಮಯಣದರ್ಶನಂ ಮಹಾಕಾವ್ಯದ ಜೊತೆಗೆ ಕಾನೂರು ಸುಬ್ಬಮ್ಮ ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಬೃಹತ್ ಕಾದಂಬರಿಗಳನ್ನು ಬರೆದಿದ್ದಾರೆ. ಈಗಿನ ಕಾಲದಂತೆ ಅವತ್ತು ಅವರ ಸಾಹಿತ್ಯ ಆಂಗ್ಲ ಭಾಷೆಗೆ ಅನುವಾದವಾಗಿದ್ದರೆ
ಸಿಂಡಿಕೇಟ್ ಸದಸ್ಯ ಡಾ.ಸಿ. ಬಸವರಾಜು ಜಟ್ಟಿಹುಂಡಿ ಮಾತನಾಡಿ, ಕುವೆಂಪು ಅವರು ಇರದಿದ್ದರೆ ಕನ್ನಡ ಸಾಹಿತ್ಯ ಇಷ್ಟೊಂದು ಶ್ರೀಮಂತವಾಗುತ್ತಿರಲಿಲ್ಲ ಎಂದರು.
ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ಸಿ. ನಾಗರಾಜು ಮಾತನಾಡಿ, ಪ್ರತಿ ಮೂರು ತಿಂಗಳಿಗೊಮ್ಮೆ ಮಾನಸ ಗಂಗೋತ್ರಿಯಲ್ಲಿ ಕುವಂಪು ಅವರ ಸಾಹಿತ್ಯ- ವಿಚಾರಧಾರೆ ಕುರಿತು ವಿಚಾರ ಸಂಕಿರಣ ಏರ್ಪಡಿಸಿ, ಯುವಪೀಳಿಗೆಗೆ ತಿಳಿಸಿಕೊಡಬೇಕು ಎಂದು ಕುಲಪತಿಯವರಿಗೆ ಮನವಿ ಮಾಡಿದರು.