ಕುವೆಂಪು ಜೀವನವೇ ವಿಶ್ವಕ್ಕೆ ದಿಕ್ಸೂಚಿ: ಡಾ.ವೃಷಭೇಂದ್ರಾಚಾರ್

KannadaprabhaNewsNetwork |  
Published : Dec 30, 2024, 01:00 AM IST
ಕೂಡ್ಲಿಗಿ ತಾಲೂಕು ಹೊಸಹಳ್ಳಿಯಲ್ಲಿ ಕಸಾಪ ಹೊಸಹಳ್ಳಿ ಹೋಬಳಿ ಘಟಕ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ್ಲಲಿ ಕಸಾಪ ಅಧ್ಯಕ್ಷ ಎಸ್.ತಿಪ್ಪೇಸ್ವಾಮಿ ಮಾತನಾಡಿದರು.      | Kannada Prabha

ಸಾರಾಂಶ

ಕುವೆಂಪು ತಮ್ಮ ಜೀವನ ಮೌಲ್ಯಗಳು, ಕೃತಿಗಳ ಮೂಲಕ ಇಡೀ ವಿಶ್ವಕ್ಕೆ ವಿಶ್ವಮಾನವ ಸಂದೇಶ ತಲುಪಿಸಿದ್ದಾರೆ

ಕೂಡ್ಲಿಗಿ: ಕುವೆಂಪು ತಮ್ಮ ಜೀವನ ಮೌಲ್ಯಗಳು, ಕೃತಿಗಳ ಮೂಲಕ ಇಡೀ ವಿಶ್ವಕ್ಕೆ ವಿಶ್ವಮಾನವ ಸಂದೇಶ ತಲುಪಿಸಿದ್ದಾರೆ. ಅವರ ಹಾದಿಯಲ್ಲಿ ಕನ್ನಡ ಭಾಷೆ, ಸಾಹಿತ್ಯ ಶ್ರೀಮಂತಗೊಂಡಿದೆ ಎಂದು ಸಾಹಿತಿ ಡಾ.ವೃಷಭೇಂದ್ರಾಚಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ತಾಲೂಕಿನ ಹೊಸಹಳ್ಳಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಸಾಪ ಹೊಸಹಳ್ಳಿ ಹೋಬಳಿ ಘಟಕ ಆಯೋಜಿಸಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಕುವೆಂಪು ಅವರ ಜೀವನವೇ ಒಂದು ಅಮೂಲ್ಯ ಗ್ರಂಥವಾಗಿದ್ದು ಅವರ ವಿಶ್ವಭ್ರಾತೃತ್ವ, ಸಮಾನತೆ, ಮಾನವೀಯ ಕಳಕಳಿ, ಪರಿಸರ ಅಳಿವು, ಉಳಿವಿನ ಬಗ್ಗೆ ಅವರ ನಡೆ ನುಡಿಗಳು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಹೊಸಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎಸ್.ತಿಪ್ಪೇಸ್ವಾಮಿ ಮಾತನಾಡಿ, ಕುವೆಂಪು ಕನ್ನಡನಾಡಿನ ಅಸ್ಮಿತೆಯಾಗಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಆಧುನಿಕ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಮೊದಲ ಪಂಕ್ತಿಯಲ್ಲಿ ನಿಲ್ಲುತ್ತಾರೆ. ಅವರ ಪರಿಸರ ಕಾಳಜಿ, ಜೀವನ ಮೌಲ್ಯಗಳು, ಪರಸ್ಪರ ಬಾಂಧವ್ಯ, ಸರಳ ಜೀವನದ ಮೌಲ್ಯಯುತ ಬದುಕು ಬರಹಗಳು ಇಂದಿಗೂ ವಿಶ್ವದ ಉಳಿವಿಗೆ ಕಾರಣವಾಗಿವೆ ಎಂದರು.

ನಂತರ ಹೊಸಹಳ್ಳಿ ಹೋಬಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಡೆದು ಬಂದ ದಾರಿ ಮತ್ತು ಸಾಹಿತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾಗಿ ತಿಳಿಸಿದರು.

ವಿಜಯನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎನ್.ಎಂ.ರವಿಕುಮಾರ್ ಕುವೆಂಪು ಮಾತನಾಡಿದರು. ಡಾ.ಎ.ಕರಿಬಸಪ್ಪ ಕುವೆಂಪು ಅವರ ಕೃತಿಗಳ ಪರಿಚಯ ಮತ್ತು ಮೌಲ್ಯಗಳ ಕುರಿತು ಮಾತನಾಡಿದರು. ಕೂಡ್ಲಿಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರಣಂ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ನಡೆದ ಕವಿಗೋಷ್ಠಿಯಲ್ಲಿ ನಾಗರಾಜ ಹಿರೇಕುಂಬಳಗುಂಟೆ, ಕೆ.ಎಂ. ಮಧುಸೂಧನ, ಟಿ.ಎಂ. ಸಿದ್ದಲಿಂಗಮೂರ್ತಿ, ಸಿ.ಮಂಜುನಾಥ, ಟಿ.ಎಚ್.ಎಂ. ಶೇಖರಯ್ಯ, ಜ್ಯೋತಿನಾಯಕ ಸೇರಿದಂತೆ ಹಲವು ಯುವಕವಿಗಳು ಕವಿತೆವಾಚನ ಮಾಡಿದರು.

ಇತ್ತೀಚೆಗೆ ಹೊಸಹಳ್ಳಿ ಭಾಗದಲ್ಲಿ ಡಾಕ್ಟರೇಟ್ ಪಡೆದ ಟಿ.ಓಂಕಾರಪ್ಪ ಅವರನ್ನು ಸನ್ಮಾನಿಸಲಾಯಿತು. ಶ್ಯಾಮಸುಂದರ ಸಫಾರೆ ಸ್ವಾಗತಿಸಿದರು. ಗುರುಮೂರ್ತಿಸ್ವಾಮಿ ನಿರೂಪಿಸಿದರು. ಶಿಕ್ಷಕ ಬೊಮ್ಮಯ್ಯ ವಂದಿಸಿದರು.

ಕೂಡ್ಲಿಗಿ ತಾಲೂಕು ಹೊಸಹಳ್ಳಿಯಲ್ಲಿ ಕಸಾಪ ಹೊಸಹಳ್ಳಿ ಹೋಬಳಿ ಘಟಕ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ್ಲಲಿ ಕಸಾಪ ಅಧ್ಯಕ್ಷ ಎಸ್.ತಿಪ್ಪೇಸ್ವಾಮಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ
ಏಪ್ರಿಲ್‌ನಿಂದ ಆಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಮದ್ಯ ಸುಂಕ