ಕಾರ್ಮಿಕ ಇಲಾಖೆ ಹಠಾತ್ ದಾಳಿ: ಬಾಲ ಕಾರ್ಮಿಕರ ರಕ್ಷಣೆ

KannadaprabhaNewsNetwork |  
Published : Nov 14, 2025, 01:00 AM IST
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗುಂಜನೂರು, ಚಿನ್ನಕಾರ್ ಕ್ರಾಸ್, ಬೆಟ್ಟದಹಳ್ಳಿ ರಸ್ತೆಯ ಮಾರ್ಗವಾಗಿ ನ.5 ರಂದು ಆಟೋ, ಟಂಟಂಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆಂಬ ಎಂಬ ಮಾಹಿತಿಯ ಮೇರೆಗೆ ಹಠಾತ್ ದಾಳಿಯನ್ನು ಕೈಗೊಂಡು ಕೂಲಿ ಕೆಲಸಕ್ಕಾಗಿ ಆಟೋಗಳಲ್ಲಿ ತೆರಳಿದ್ದ ಸುಮಾರು 12ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಯಿತು. | Kannada Prabha

ಸಾರಾಂಶ

ಮಕ್ಕಳನ್ನು ಮತ್ತೊಮ್ಮೆ ಕೂಲಿಗೆ ಕಳುಹಿಸದೆ ಶಾಲೆಗೆ ಕಳುಹಿಸುವಂತೆ ಪಾಲಕ, ಪೋಷಕರು ಹಾಗೂ ಆಟೋ, ಟಂಟಂಗಳ ಚಾಲಕರಿಗೆ “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ1986, ತಿದ್ದುಪಡಿ 2016”ರ ಕುರಿತು ಜಾಗೃತಿ ಮೂಡಿಸಲಾಯಿತು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮಕ್ಕಳನ್ನು ಮತ್ತೊಮ್ಮೆ ಕೂಲಿಗೆ ಕಳುಹಿಸದೆ ಶಾಲೆಗೆ ಕಳುಹಿಸುವಂತೆ ಪಾಲಕ, ಪೋಷಕರು ಹಾಗೂ ಆಟೋ, ಟಂಟಂಗಳ ಚಾಲಕರಿಗೆ “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ1986, ತಿದ್ದುಪಡಿ 2016”ರ ಕುರಿತು ಜಾಗೃತಿ ಮೂಡಿಸಲಾಯಿತು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಹೇಳಿದರು.

ಜಿಲ್ಲೆಯ ಗುರುಮಠಕಲ್ ತಾಲೂಕಿನ ಗುಂಜನೂರು, ಚಿನ್ನಕಾರ್ ಕ್ರಾಸ್, ಬೆಟ್ಟದಹಳ್ಳಿ ರಸ್ತೆಯ ಮಾರ್ಗವಾಗಿ ನ.5 ರಂದು ಆಟೋ, ಟಂಟಂಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆಂಬ ಎಂಬ ಮಾಹಿತಿಯ ಮೇರೆಗೆ ಹಠಾತ್ ದಾಳಿ ನಡೆಸಿ 12ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ನಿರಂತರ ಜನ ಜಾಗೃತಿ, ಕಾನೂನು ಅರಿವು, ನೆರವು ಕಾರ್ಯಕ್ರಮ, ಬೀದಿನಾಟಕ, ಆಟೋ-ಪ್ರಚಾರ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ನಿರಂತರವಾಗಿ ಬಾಲ/ಕಿಶೋರ ಕಾರ್ಮಿಕ ಪದ್ಧತಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಹೊರತಾಗಿಯೂ ಆಟೋ, ಟಂಟಂಗಳ ಮೂಲಕ ಕೃಷಿ ಹಾಗೂ ಇನ್ನಿತರೆ ಕೆಲಸಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನಗಳ ಚಾಲಕರ ವಿರುದ್ಧ ಆರ್.ಟಿ.ಒ ಅಧಿಕಾರಿಗಳ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಸಂಗೀತಾ ಹೊನ್ನೂರು ಮಾತನಾಡಿ, ಓದುವ ಮಕ್ಕಳನ್ನು ಕೂಲಿಗೆ ಕಳುಹಿಸಿ ಮಕ್ಕಳ ಭವಿಷ್ಯವನ್ನು ಕುಗ್ಗಿಸಬೇಡಿ ಎಂದು ಪಾಲಕ, ಪೋಷಕರಿಗೆ ತಿಳಿಸಿ, ಮಕ್ಕಳ ಸಹಾಯವಾಣಿ 1098ಗೆ ಸಂಪರ್ಕಿಸಿ ಎಂದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ನಿರೀಕ್ಷಕರಾದ ಹಯ್ಯಾಳಪ್ಪ, ಶಿಕ್ಷಣ ಸಂಯೋಜಕರಾದ ಪ್ರಕಾಶ್ ವೀರಶಾಸ್ತ್ರಿ, ಸಿ, ಆರ್, ಪಿ ಜೈಪಾಲ್ ರೆಡ್ಡಿ, ಸರ್ಕಾರಿ ಹಿರಿಯ ಪ್ರೌಢ ಶಾಲೆ ಗುಂಜನೂರು ಮುಖ್ಯೋಪಾಧ್ಯಾಯರಾದ ಆಶಿರೆಡ್ಡಿ ಮಕ್ಕಳ ರಕ್ಷಣ ಘಟಕ 1098ನ ಮಹೇಶ್ ಕುಮಾರ, ಕಾರ್ಮಿಕ ಇಲಾಖೆಯ ಲೆಕ್ಕಿಗರಾದ ಬಾಲು ನಾಯಕ, ಪ್ರಾದೇಶಿಕ ಸಾರಿಗೆ ಇಲಾಖೆಯ ಚಾಲಕರಾದ ಮಾಳಪ್ಪ ಪೂಜಾರಿ, ಗೃಹ ರಕ್ಷಕ ದಳದ ಚಂದ್ರಶೇಖರ್ ಮುದ್ನಾಳ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ