ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಹೋಬಳಿಯ ಗೂಳಿ ಹೊನ್ನೇನಹಳ್ಳಿ ಗ್ರಾಮದ ಸಮೀಪದ ಸೋಮವಾರ ಸಂತೆ ಬಳಿ ಸುಮಾರು 13.50 ಕೋಟಿ ರು. ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಘದ ವತಿಯಿಂದ ನಿರ್ಮಾಣಗೊಂಡಿದ್ದ ಹೋಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಪ್ರತಿ ಮಕ್ಕಳಿಗೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಲೆಂದು ಶಿಕ್ಷಣ ಇಲಾಖೆಯ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿ ಸ್ನೇಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಗುಣಮಟ್ಟದ ಫಲಿತಾಂಶಕ್ಕಾಗಿ ಹಲವು ಹೊಸ ಮಾರ್ಗಸೂಚಿ ಜಾರಿಗೆ ತರುವ ಮೂಲಕ ಉತ್ತಮ ಫಲಿತಾಂಶ ಬರಲು ಕಾರಣವಾಗಿದೆ. ಇದೇ ಮೊದಲ ಬಾರಿಗೆ ವಸತಿ ಶಾಲೆಗಳನ್ನು ಪ್ರಾರಂಭಿಸಲು ಇತ್ತೀಚೆಗೆ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ, ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗಿದ್ದು, ಇದರಿಂದ ರಾಜ್ಯದಲ್ಲಿರುವ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಸಿಗಲಿದೆ ಎಂದರು.ಕಳೆದ 2018ರಲ್ಲಿ ಹೋಬಳಿಯ ಮೊರಾರ್ಜಿ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿತ್ತು, ಅನೇಕ ಸಮಸ್ಯೆಗಳಿಂದ ವಿಳಂಬವಾದರೂ ಕಟ್ಟಡವನ್ನು ಗುಣಮಟ್ಟದಿಂದ ಕಟ್ಟಲಾಗಿದ್ದು, ವಿದ್ಯಾರ್ಥಿಗಳಿಗೆ ಕಲಿಕೆಯ ದೃಷ್ಟಿಯಿಂದ ಉತ್ತಮ ವಾತಾವರಣದಲ್ಲಿ ಶಾಲೆಯನ್ನು ನಿರ್ಮಾಣ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ವಸತಿ ಶಾಲೆಯಲ್ಲಿ ಆಡಿಟೋರಿಯಂ, ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ತಾಲೂಕಿನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ ಅವರಿಗೆ 20 ಕೋಟಿ ರು. ಅನುದಾನ ನೀಡುವಂತೆ ಒತ್ತಾಯ ಮಾಡಲಾಗಿತ್ತು. ತಮ್ಮ ಮನವಿಯಂತೆ ಸರ್ಕಾರ ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡಿದ್ದು, ಸದ್ಯದಲ್ಲೇ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ನುಗ್ಗೇಹಳ್ಳಿ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆದಾರರಿಗೆ ಸರ್ಕಾರದಿಂದ ಸುಮಾರು 3 ಕೋಟಿ ರು. ಹಣ ಬಿಡುಗಡೆ ಆಗಬೇಕಾಗಿದೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಶೀಘ್ರ ಹಣ ಬಿಡುಗಡೆಗೆ ಸೂಚನೆ ನೀಡುವಂತೆ ಮನವಿ ಮಾಡಿದರು.
ವಸತಿ ಶಾಲೆಗಳಲ್ಲಿ 100ಕ್ಕೆ 100ರಷ್ಟು ಫಲಿತಾಂಶ ನೀಡಲು ಸೂಚನೆ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿ ಪೂರ್ಣಿಮಾ, ಎಡೀಸಿ ಶಾಂತಲಾ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಕ್ರೈಸ್ ನ ಸೂಪರಿಡೆಂಟ್ ಇಂಜಿನಿಯರ್ ಜನಾರ್ದನ್, ಕಾರ್ಯಪಾಲಕ ಅಭಿಯಂತರ ಪಂಪಾಪತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ನಟರಾಜ್, ಸಹಾಯಕ ಅಭಿಯಂತರ ಮಹೇಶ್, ಗುತ್ತಿಗೆದಾರ ಪ್ರಸನ್ನಕುಮಾರ್, ಮಟ್ಟನವಿಲೆ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷ ಅಶೋಕ್, ಎಸಿ ಮಾರುತಿ, ತಹಸೀಲ್ದಾರ್ ಶಂಕರಪ್ಪ, ಬಿಇಒ ಎಚ್ಎನ್ ದೀಪಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹರೀಶ್, ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ವಿಸ್ತಾರಣಾಧಿಕಾರಿ ರಾಜೇಶ್ ಚೌವ್ಹಾಣ್, ಹೋಬಳಿ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲರಾದ ಸಂಚಿತ ಎಚ್. ವಿ. ಸೇರಿದಂತೆ ಇತರರು ಹಾಜರಿದ್ದರು.
-ಕೆ.ಎನ್. ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವರು