ಒಕ್ಕಲಿಗ ಸಮುದಾಯದಲ್ಲಿ ಸಂಘಟನೆ ಕೊರತೆ

KannadaprabhaNewsNetwork |  
Published : Jan 06, 2025, 01:00 AM IST
೫ಕೆಎಲ್‌ಆರ್-೧೧ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗೌಡರ ವೇದಿಕೆ ಜಿಲ್ಲಾ ಘಟಕ ಗೌಡರ ವೇದಿಕೆ ಸಂಸ್ಥಾಪಕ ಕೃಷ್ಣೇಗೌಡ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಹೆಸರಿಗಷ್ಟೇ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ, ಆದರೆ ನಿಜವಾಗಿಯೂ ನಿಗಮದಿಂದ ಅರ್ಹರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಸರ್ಕಾರದ ಯೋಜನೆಗಳು ಕೆಲವರೇ ಅನುಭವಿಸುತ್ತಿದ್ದಾರೆ. ಇದನ್ನು ಪಡೆದುಕೊಳ್ಳಲು ಸಂಘಟನೆಯಾಗಬೇಕು. ವಿಧಾನಸೌಧ, ವಿಕಾಸಸೌಧ ಕಟ್ಟಿಸಿದವರು ಒಕ್ಕಲಿಗರು ಎಂಬುದನ್ನು ಸರ್ಕಾರ ಮರೆಯಬಾರದು

ಕನ್ನಡಪ್ರಭ ವಾರ್ತೆ ಕೋಲಾರಒಕ್ಕಲಿಗ ಸಮುದಾಯದಲ್ಲಿ ಸಂಘಟನೆಯ ಕೊರತೆಯಿರುವುದರಿಂದ ಚದುರಿ ಹೋಗಿದೆ. ಇದರಿಂದಾಗಿ ಸಮರ್ಪಕವಾಗಿ ಸೌಲಭ್ಯಗಳು ದೊರೆಯುತ್ತಿಲ್ಲ, ಇನ್ನಾದರು ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ತಪ್ಪಿದಲ್ಲ ಎಂದು ಗೌಡರ ವೇದಿಕೆ ಸಂಸ್ಥಾಪಕ ಕೃಷ್ಣೇಗೌಡ ಎಚ್ಚರಿಸಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗೌಡರ ವೇದಿಕೆ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹೆಸರಿಗಷ್ಟೇ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ, ಆದರೆ ನಿಜವಾಗಿಯೂ ನಿಗಮದಿಂದ ಅರ್ಹರಿಗೆ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದರು.ಯೋಜನೆಗಳು ಕೆಲವರ ಪಾಲು

ಕೋಲಾರದಲ್ಲಿ ಉಚಿತವಾಗಿ ವಧು-ವರರ ಅನ್ವೇಷಣೆ ಕೇಂದ್ರ ತೆರೆಯಲಾಗುವುದು, ಸರ್ಕಾರದ ಯೋಜನೆಗಳು ಕೆಲವರೇ ಅನುಭವಿಸುತ್ತಿದ್ದಾರೆ. ಇದನ್ನು ಪಡೆದುಕೊಳ್ಳಲು ಸಂಘಟನೆಯಾಗಬೇಕು. ವಿಧಾನಸೌಧ, ವಿಕಾಸಸೌಧ ಕಟ್ಟಿಸಿದವರು ಒಕ್ಕಲಿಗರು ಎಂಬುದನ್ನು ಸರ್ಕಾರ ಮರೆಯಬಾರದು ಎಂದು ತಿಳಿಸಿದರು.ಏ.೧೧ ಮತ್ತು ೧೨ರಂದು ಒಕ್ಕಲಿಗರ ಸಾಹಿತ್ಯ ಸಮ್ಮೇಳನ ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಡೆಸಲು ಕ್ರಮವಹಿಸಿದ್ದು, ಇದರ ರೂಪುರೇಶೆಗಳು ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಜಿಲ್ಲೆಯಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು. ಉಪ ಜಾತಿಗಳು ಒಂದಾಗಲಿ

ದಳಸನೂರು ಗೋಪಾಲಕೃಷ್ಣ ಮಾತನಾಡಿ, ಒಕ್ಕಲಿಗ ಸಮುದಾಯದಲ್ಲಿ ಬಡವರು ಶ್ರೀಮಂತರು ಇದ್ದಾರೆ, ಉಪ ಜಾತಿಗಳ ಹೆಸರಿನಲ್ಲಿ ಒಕ್ಕಲಿಗ ಸಮುದಾಯ ಚದುರುಹೋಗಿದೆ, ಒಗ್ಗಟ್ಟಾಗದಿದ್ದರೆ ಮುಂದೆ ಒಂದಾಗುವುದು ಕಷ್ಟ, ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಬೇಕೆಂದರು.

ಒಕ್ಕಲಿಗ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ.ಕುಮಾರ್ ಮಾತನಾಡಿ, ಜಾತಿ ಗಣತಿ ವೈಜ್ಞಾನಿಕವಾಗಿಲ್ಲ. ಜಾತಿಗಣತಿ ಬಿಡುಗಡೆ ಮಾಡಿ ಅದರಲ್ಲಿ ಒಕ್ಜಲಿಗರಿಗೆ ಅನ್ಯಾಯವಾದರೆ ಹೋರಾಟಕ್ಕೆ ಇಳಿಯಬೇಕು ಎಂದು ಹೇಳಿದರು.

ರಾಜಕಾರಣಿಗಳೇ ಕಾರಣ

ಗೌಡತಿಯರ ವೇದಿಕೆ ಅಧ್ಯಕ್ಷೆ ರೇಣುಕಾ ಮಾತನಾಡಿ, ಒಕ್ಕಲಿಗ ಸಮುದಾಯವನ್ನು ಚದುರಿಸುತ್ತಿರುವು ರಾಜಕಾರಣಿಗಳೆ, ಚುನಾವಣೆಯಲ್ಲಿ ಗೆಲ್ಲುವ ಮುಂಚೆ ಸಮುದಾಯ, ಗೆದ್ದ ಮೇಲೆ ಎಲ್ಲಾ ಸಮುದಾಯ ಅಂತಾರೆ ರಾಜಕಾರಣಿಗಳು ಎಂದು ಹೇಳಿದರು.ಮುಖಂಡರಾದ ಆಲಂಗೂರು ಶಿವಣ್ಣ, ಡಾ.ವೈ.ವಿ.ವೆಂಕಟಚಲಪತಿ, ಸಂಶೋಧಕಿ ಸುನಿತಾ, ಬಾಬು ಮೌನಿ, ಎನ್.ನಾಗರಾಜ್, ರವಿ ಕುಮಾರ್, ಸುನಿತಾ ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ