ಕೆರೆಗಳ ಸರ್ವೇ: ಒತ್ತುವರಿ ತೆರವು

KannadaprabhaNewsNetwork |  
Published : May 22, 2025, 01:11 AM IST
21ಕೆಜಿಎಫ್‌2 | Kannada Prabha

ಸಾರಾಂಶ

ಕೆಜಿಎಫ್‌ ತಾಲೂಕಿನಲ್ಲಿ ಈಗ ೧೧೮ ಕೆರೆಗಳ ಸರ್ವೇ ಮಾಡಲಾಗಿದ್ದು, ೭೬ ಕೆರೆಗಳ ಒತ್ತುವರಿಯನ್ನು ತೆರವು ಮಾಡಿಸಲಾಗಿದೆ. ಮುಂದಿನ ೪ ದಿನಗಳಲ್ಲಿ ೧೦೦ ಕೆರೆಗಳನ್ನು ಸರ್ವೇ ಮಾಡಲಾಗುವುದು. ಈ ಕೆರೆಗಳ ಒತ್ತುವರಿ ಮಾಡಿರುವುದು ಕಂಡುಬಂದಲ್ಲಿ ಒತ್ತುವರಿಯನ್ನು ಮುಲಾಜಿಲ್ಲದೇ ತೆರವುಗೊಳಿಸಲಾಗುವುದು

ಕನ್ನಡಪ್ರಭ ವಾರ್ತೆ ಕೆಜಿಎಫ್ ತಾಲೂಕಿನಾದ್ಯಂತ ೩೧೫ ಕೆರೆಗಳಿದ್ದು, ಈಗಾಗಲೇ ೧೧೮ ಕೆರೆಗಳ ಸರ್ವೇ ಮಾಡಲಾಗಿದೆ. ಇವುಗಳಲ್ಲಿ ೭೬ ಕೆರೆಗಳ ಒತ್ತುವರಿಯನ್ನು ತೆರವು ಮಾಡಿಸಲಾಗಿದೆ. ಮುಂದಿನ ೪ ದಿನಗಳಲ್ಲಿ ೧೦೦ ಕೆರೆಗಳನ್ನು ಸರ್ವೇ ಮಾಡಿ, ಅದರಲ್ಲೇನಾದರೂ ಒತ್ತುವರಿಯಾಗಿರುವುದು ಕಂಡುಬಂದಲ್ಲಿ ಒತ್ತುವರಿಯನ್ನು ಮುಲಾಜಿಲ್ಲದೇ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು. ತಾಲೂಕಿನಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮೀಕ್ಷೆ ಒಳಗೊಂಡಂತೆ ಕಂದಾಯ ಇಲಾಖೆಯಲ್ಲಿ ದಾಖಲೆಗಳ ಡಿಜಿಟಲೀಕರಣ ಹಾಗೂ ಭೂಮಿ ತಂತ್ರಾಂಶದ ಕುರಿತ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸುವ ನಿಟ್ಟಿನಲ್ಲಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಒಳಗೊಂಡಂತೆ ಅಧಿಕಾರಿಗಳ ಸಭೆಯನ್ನು ನಡೆಸಿದರು. ಅಕ್ರಮ ಗಣಿಗಾರಿಕೆಗೆ ಬ್ರೇಕ್

ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಖಚಿತ ಮಾಹಿತಿ ನೀಡಿದಲ್ಲಿ ಕಳೆದ ಹಲವು ದಿನಗಳ ಹಿಂದೆ ಉಪ ಲೋಕಾಯುಕ್ತ ನ್ಯಾಯಾಧೀಶರು ಜಿಲ್ಲೆಯ ಮಾಲೂರು ತಾಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮಾಲೂರು ತಾಲೂಕಿನಲ್ಲಿನ ಎಲ್ಲ ಕಲ್ಲು ಗಣಿಗಾರಿಕೆ ನಡೆಯುವ ಸ್ಥಳಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದರು.ಖಾಸಗಿ ಶಾಲೆಗಳಿಗೆ ಎಚ್ಚರಿಕೆ

ನಗರದ ಕೆಲವು ಖಾಸಗಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಮೊತ್ತದ ಶುಲ್ಕವನ್ನು ವಸೂಲಿ ಮಾಡುತ್ತಿದ್ದಾರೆ ಮತ್ತು ಸಮವಸ್ತ್ರ, ಪಠ್ಯ ಪುಸ್ತಕ, ನೋಟ್‌ಪುಸ್ತಕಗಳನ್ನು ಶಾಲೆಯಲ್ಲಿಯೇ ಖರೀದಿ ಮಾಡುತ್ತಿರುವುದರ ಬಗ್ಗೆ ನಿಖರವಾಗಿ ದೂರು ನೀಡಿದಲ್ಲಿ ಸಂಬಂಧಪಟ್ಟ ಬಿಇಒ ಮತ್ತು ಡಿಡಿಪಿಐ ರವರಿಂದ ವರದಿ ಬಂದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸುವುದು ಸೇರಿದಂತೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗವೇಣಿ, ಶಿರಸ್ತೇದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಮುನಿವೆಂಕಟಸ್ವಾಮಿ, ಚಂದ್ರಮೋಹನ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಧಾರಸಹಿತ ಇತಿಹಾಸಕಾರರನ್ನು ಪರಿಚಯಿಸಿ
ಬಿಜೆಪಿಯವರಿಗೆ ದ್ವೇಷ ಭಾಷಣ ಬೇಕಾ?: ಪದ್ಮರಾಜ್‌ ಪ್ರಶ್ನೆ