ಕೆರೆ ಜಲ ಜಾಗೃತಿ, ಶುದ್ಧತಾ ಅಭಿಯಾನ

KannadaprabhaNewsNetwork |  
Published : Sep 23, 2025, 01:05 AM IST
ಕೆರೆ ಜಲ ಜಾಗೃತಿ ಮತ್ತು ಶುದ್ಧತಾ ಅಭಿಯಾನ | Kannada Prabha

ಸಾರಾಂಶ

ರೋಟರಿ ಕ್ಲಬ್ ನಿಟ್ಟೆ, ರೋಟರಿ ಸಮುದಾಯ ದಳ ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್, ಕೆಮ್ಮಣ್ಣು ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಜಿಲ್ಲಾ ಯೋಜನೆಯಾದ “ಕೆರೆಗಳ ಸಂರಕ್ಷಣೆ” ಕಾರ್ಯಕ್ರಮದಡಿ “ಕೆರೆಜಲ ಜಾಗೃತಿ ಮತ್ತು ಶುದ್ಧತಾ ಅಭಿಯಾನ”**ವನ್ನು ಸೆ. 21, ರಂದು ಬೆಳಗ್ಗೆ 9 ಗಂಟೆಗೆ ಕೆಮ್ಮಣ್ಣಿನ ಶ್ರೀ ಕ್ಷೇತ್ರ ಕೆಮ್ಮಣ್ಣು ದೇವಳದ ಕೆರೆಯಲ್ಲಿ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ರೋಟರಿ ಕ್ಲಬ್ ನಿಟ್ಟೆ, ರೋಟರಿ ಸಮುದಾಯ ದಳ ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್, ಕೆಮ್ಮಣ್ಣು ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಜಿಲ್ಲಾ ಯೋಜನೆಯಾದ “ಕೆರೆಗಳ ಸಂರಕ್ಷಣೆ” ಕಾರ್ಯಕ್ರಮದಡಿ “ಕೆರೆಜಲ ಜಾಗೃತಿ ಮತ್ತು ಶುದ್ಧತಾ ಅಭಿಯಾನ”ವನ್ನು ಸೆ. 21, ರಂದು ಬೆಳಗ್ಗೆ 9 ಗಂಟೆಗೆ ಕೆಮ್ಮಣ್ಣಿನ ಶ್ರೀ ಕ್ಷೇತ್ರ ಕೆಮ್ಮಣ್ಣು ದೇವಳದ ಕೆರೆಯಲ್ಲಿ ಆಯೋಜಿಸಲಾಯಿತು.

ಈ ಅಭಿಯಾನಕ್ಕೆ ರೋಟರಿ ಕ್ಲಬ್ ನಿಟ್ಟೆಯ ಹಿರಿಯ ಸದಸ್ಯ ರೊ. ಯೋಗೀಶ್ ಹೆಗ್ಡೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನಿಟ್ಟೆಯ ಅಧ್ಯಕ್ಷ ರೊ. ಡಾ. ರಘುನಂದನ್ ಕೆ.ಆರ್., ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಶೆಟ್ಟಿ, ರೋಟರಿ ಸಮುದಾಯ ದಳದ ಅಧ್ಯಕ್ಷ ಗಣೇಶ್ ಕೆಮ್ಮಣ್ಣು ಹಾಗೂ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ರೊ. ಡಾ. ಪ್ರಶಾಂತ್ ಉಪಸ್ಥಿತರಿದ್ದರು.

ಅಭಿಯಾನದ ಅಂಗವಾಗಿ ಸುಮಾರು 47 ಜನ ಸೇವಕರು ಭಾಗವಹಿಸಿ ಕೆರೆ ಶುದ್ಧೀಕರಣ ಮತ್ತು ಜಾಗೃತಿ ಚಟುವಟಿಕೆಗಳಲ್ಲಿ ತೊಡಗಿದರು.

ಈ ಕಾರ್ಯಕ್ರಮವು ಕೆರೆಗಳ ಸಂರಕ್ಷಣೆ, ಪರಿಸರ ಶುದ್ಧತೆ ಹಾಗೂ ಸಾರ್ವಜನಿಕ ಜಾಗೃತಿಯ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ