ಚಿಕ್ಕಮರಳಿ ಹಾಲು ಉತ್ಪಾದಕರ ಸಂಘಕ್ಕೆ ಲಕ್ಷ್ಮಣಶೆಟ್ಟಿ ಸಾರಥಿ

KannadaprabhaNewsNetwork |  
Published : Jun 11, 2025, 12:10 PM IST
10ಕೆಎಂಎನ್ ಡಿ16 | Kannada Prabha

ಸಾರಾಂಶ

ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಲಕ್ಷ್ಮಣಶೆಟ್ಟಿ, ಉಪಾಧ್ಯಕ್ಷರಾಗಿ ಸಿ.ಕೆ.ನಿಂಗೇಗೌಡ ಅವಿರೋಧವಾಗಿ ಆಯ್ಕೆ. ಬೆಂಬಲಿಗರಿಂದ ಸಂಭ್ರಮಾಚರಣೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಚಿಕ್ಕಮರಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಲಕ್ಷ್ಮಣಶೆಟ್ಟಿ, ಉಪಾಧ್ಯಕ್ಷರಾಗಿ ಸಿ.ಕೆ.ನಿಂಗೇಗೌಡ ಅವಿರೋಧವಾಗಿ ಆಯ್ಕೆಯಾದರು.

ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣಶೆಟ್ಟಿ ಹಾಗೂ ಸಿ.ಪ್ರಕಾಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಿ.ಕೆ.ನಿಂಗೇಗೌಡ ಹಾಗೂ ಸೌಭಾಗ್ಯಮ್ಮ ನಾಮಪತ್ರ ಸಲ್ಲಿಸಿದರು. ನಂತರ ಸಿ.ಪ್ರಕಾಶ್ ಮತ್ತು ಸೌಭಾಗ್ಯಮ್ಮ ನಾಮಪತ್ರ ವಾಪಸ್ ಪಡೆದರು.

ಅಧ್ಯಕ್ಷರಾಗಿ ಸ್ಥಾನಕ್ಕೆ ಲಕ್ಷ್ಮಣಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸಿ.ಕೆ.ನಿಂಗೇಗೌಡ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ನಿರ್ಮಲಾ ಘೋಷಿಸಿದರು. ನಂತರ ಎಲ್ಲಾ ನಿರ್ದೇಶಕರು, ತಾಪಂ ಮಾಜಿ ಸದಸ್ಯೆ ಮಂಗಳ ನವೀನ್ ಸೇರಿದಂತೆ ಮುಖಂಡರು ನೂತನ ಅಧ್ಯಕ್ಷ - ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಸಂಘದ ನಿರ್ದೇಶಕರಾದ ಪಿ.ರಮೇಶ್, ಸಿ.ಪಿ.ಮಹದೇವಶೆಟ್ಟಿ(ಕ್ಯಾತಶೆಟ್ಟಿ), ಸಿ.ಎನ್.ಉಮೇಶ್, ಕೆ.ಕಂಚಯ್ಯ, ಸಿ.ಪ್ರಕಾಶ್, ಸಿ.ರಾಜಶೇಖರ್, ಸಿ.ಎನ್.ಪುಷ್ಪ, ಸೌಭಾಗ್ಯಮ್ಮ ಸೇರಿದಂತೆ ಹಲವರು ಇದ್ದರು.

ನಾರಾಯಣಗೌಡರ ಹುಟ್ಟುಹಬ್ಬ ರೋಗಿಗಳಿಗೆ ಹಣ್ಣು ವಿತರಣೆ

ಶ್ರೀರಂಗಪಟ್ಟಣ:

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಅಧ್ಯಕ್ಷ ಜಿ.ಜಿ.ಹರೀಶ್‌ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ನಂತರ ಮಾತನಾಡಿದ ಹರೀಶ್ ಗೌಡ, ನಾರಾಯಣಗೌಡರು ನಾಡು, ನುಡಿ, ಜಲದ ವಿಷಯ ಹಾಗೂ ಕನ್ನಡಿಗರಿಗೆ ಅನ್ಯಾಯವಾದಲ್ಲಿ ದ್ವನಿ ಎತ್ತುವ ಮೊದಲ ನಾಯಕರು ಎಂದರು.

ಇತ್ತೀಚೆಗೆ ನಟ ಕಮಲ್‌ ಹಾಸನ್ ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ್ದ ತೀವ್ರವಾಗಿ ಖಂಡಿಸಿ ಹೋರಾಟ ನಡೆಸಿದ್ದಾರೆ. ಕನ್ನಡ ನಾಡು, ನುಡಿ, ಜಲ ವಿಷಯವಾಗಿ ಹಲವು ಬಾರಿ ಜೈಲಿಗೂ ಹೊಗಿ ಬಂದಿದ್ದಾರೆ. ನಾಡಿನಲ್ಲಿ ಕನ್ನಡದ ಅಳಿವು ಉಳಿವಿಗಾಗಿ ಅವರ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದರು.

ಈ ವೇಳೆ ಚೇತನ್, ಗಣೇಶ್, ನಂದನ್, ಲೋಹತ್, ಚಂದ್ರು, ಕುಮಾರ್, ಕೌಶಿಕ್, ಅರುಣ್ ಸೇರಿದಂತೆ ಇತರರು ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ