ಗುಳಿಸಾತೇನಹಳ್ಳಿಯಲ್ಲಿ ಲಕ್ಷ್ಮೀದೇವಿ ಬಂಡೀಹಬ್ಬ

KannadaprabhaNewsNetwork |  
Published : May 18, 2026, 01:30 AM IST
17ಎಚ್ಎಸ್ಎನ್5 : ಹೊಳೆನರಸೀಪುರ ತಾ. ಗುಳಿಸಾತೇನಹಳ್ಳಿಯಲ್ಲಿ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿಯ ಬಂಡಿಹಬ್ಬ ವೈಭವದಿಂದ ನಡೆಯಿತು | Kannada Prabha

ಸಾರಾಂಶ

ಗ್ರಾಮದಲ್ಲಿ ಶ್ರೀದೇವಿಯ ಉತ್ಸವ ಮೆರವಣಿಗೆ ನಡೆಸಿದ ನಂತರ ದೇವಾಲಯದಲ್ಲಿ ಶ್ರೀ ದೇವಿಯ ಮೂಲಮೂರ್ತಿಗೆ ಪೂಜಾ ಕೈಂಕರ್ಯ ನೆರವೇರಿಸಿ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಪೂರ್ವಿಕರ ಆಚರಣೆಯಂತೆ ಗ್ರಾಮಸ್ಥರು ಹರಕೆ ಸಮರ್ಪಿಸಿದರು. ಗ್ರಾಪಂ ಮಾಜಿ ಸದಸ್ಯ ರಂಗಸ್ವಾಮಿ, ಸದಸ್ಯ ಕೃಷ್ಣೇಗೌಡ, ಹಿರಿಯರಾದ ಶೇಷಪ್ಪ ಗೌಡ, ಪ್ರಭಾಕರ್‌, ಶಾಂತರಾಜು, ಸುರೇಶ್, ಶ್ರೀನಿವಾಸ(ಸ್ವಾಮಿ) ಹಾಗೂ ಗ್ರಾಮಸ್ಥರು ಪೂಜಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಹೊಳೆನರಸೀಪುರ: ತಾಲೂಕಿನ ಗುಳಿಸಾತೇನಹಳ್ಳಿಯಲ್ಲಿ ಗ್ರಾಮದೇವತೆ ಲಕ್ಷ್ಮೀ ದೇವಿ ಅಮ್ಮನವರ ಬಂಡಿಹಬ್ಬವು ಸಂಪ್ರದಾಯದ ಆಚರಣೆಯಂತೆ ವೈಭವದಿಂದ ನಡೆಯಿತು.

ಗ್ರಾಮದ ಹಿರಿಯರ ಮಾರ್ಗದರ್ಶನದಲ್ಲಿ ಶುಕ್ರವಾರ ಮುಂಜಾನೆ ಹೇಮಾವತಿ ನದಿ ತೀರದಲ್ಲಿ ಶ್ರೀದೇವಿಯ ಉತ್ಸವ ಮೂರ್ತಿಯನ್ನು ಗಂಗೆಯಿಂದ ಶುಚಿಗೊಳಿಸಿ, ಸಂಪ್ರದಾಯದಂತೆ ಪೂಜೆ ನೆರವೇರಿಸಿದರು. ಗ್ರಾಮದಲ್ಲಿ ಶ್ರೀದೇವಿಯ ಉತ್ಸವ ಮೆರವಣಿಗೆ ನಡೆಸಿದ ನಂತರ ದೇವಾಲಯದಲ್ಲಿ ಶ್ರೀ ದೇವಿಯ ಮೂಲಮೂರ್ತಿಗೆ ಪೂಜಾ ಕೈಂಕರ್ಯ ನೆರವೇರಿಸಿ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಪೂರ್ವಿಕರ ಆಚರಣೆಯಂತೆ ಗ್ರಾಮಸ್ಥರು ಹರಕೆ ಸಮರ್ಪಿಸಿದರು. ಗ್ರಾಪಂ ಮಾಜಿ ಸದಸ್ಯ ರಂಗಸ್ವಾಮಿ, ಸದಸ್ಯ ಕೃಷ್ಣೇಗೌಡ, ಹಿರಿಯರಾದ ಶೇಷಪ್ಪ ಗೌಡ, ಪ್ರಭಾಕರ್‌, ಶಾಂತರಾಜು, ಸುರೇಶ್, ಶ್ರೀನಿವಾಸ(ಸ್ವಾಮಿ) ಹಾಗೂ ಗ್ರಾಮಸ್ಥರು ಪೂಜಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎತ್ತಿನಗಾಡಿ ಓಟ ನಮ್ಮ ಗ್ರಾಮೀಣ ಪ್ರದೇಶದ ಸೊಗಡಿನ ಸಂಸ್ಕೃತಿಯ ಪ್ರತಿಬಿಂಬ
ರೈತರ ಆರ್ಥಿಕ ಪ್ರಗತಿಗೆ ಕೈ ಜೋಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ