ವಿಜೃಂಭಣೆಯ ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ

KannadaprabhaNewsNetwork |  
Published : Jan 20, 2024, 02:02 AM IST
ಪೊಟೋ೧೯ಸಿಪಿಟಿ೩: ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರೆ ಮತ್ತು ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.  | Kannada Prabha

ಸಾರಾಂಶ

ಚನ್ನಪಟ್ಟಣ: ಅಯ್ಯನಗುಡಿ ಜಾತ್ರೆ ಎಂದೇ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರೆ ಮತ್ತು ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

ಚನ್ನಪಟ್ಟಣ: ಅಯ್ಯನಗುಡಿ ಜಾತ್ರೆ ಎಂದೇ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರೆ ಮತ್ತು ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

ಶುಕ್ರವಾರ ಬೆಳಿಗ್ಗೆ ೧೧.೫೫ ರಿಂದ ೧೨.೫೫ ಗಂಟೆಯೊಳಗೆ ಸಲ್ಲುವ ಶುಭ ಅಭಿಜನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಿ.ಬಿ.ಚಂದ್ರು ಹಾಗೂ ಇಒ ಎಚ್.ಕೆ.ರಘು ಮತ್ತು ಸದಸ್ಯರು, ಅರ್ಚಕರೊಡಗೂಡಿ ದೇವರಿಗೆ ಪೂಜೆ ಸಲ್ಲಿಸಿ ಶ್ರೀಯವರ ಬ್ರಹ್ಮರಥೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ದೇವಾಲಯವನ್ನು ಒಂದು ಸುತ್ತು ಪ್ರದಕ್ಷಣೆ ಹಾಕಿದ ರಥೋತ್ಸವ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗಿ ದೇವಸ್ಥಾನದ ಸ್ವಸ್ಥಾನಕ್ಕೆ ಬಂದು ತಲುಪಿತು. ಇದೇ ಸಂದರ್ಭದಲ್ಲಿ ಭಕ್ತರು ರಥಕ್ಕೆ ಹಣ್ಣು ಜವನ ಎಸೆದು ಭಕ್ತಿಭಾವ ಮೆರೆದರು.

ರಥೋತ್ಸವಕ್ಕೂ ಮುನ್ನಾ ಗೋಪೂಜೆ, ಗಜ, ಅಶ್ವ ಪೂಜೆ. ಶಾಂತಿ ಹೋಮ ಸೇರಿದಂತೆ ಪ್ರಮುಖ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ರಥೋತ್ಸವದ ಬಳಿಕ ರಾತ್ರಿ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.

ವಿಶೇಷ ಅಲಂಕಾರ: ರಥೋತ್ಸವದ ಪ್ರಯುಕ್ತ ಶ್ರೀ ಆಂಜನೇಯಸ್ವಾಮಿ ಮತ್ತು ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವರ ಮೂರ್ತಿಗೆ ಹೂವಿನಿಂದ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಒಳ ಆವರಣದ ಕಂಬ ಮತ್ತು ಮೇಲ್ಭಾಗವನ್ನು ಹೂವು, ವಿವಿಧ ಹಣ್ಣು ಹಾಗೂ ತರಕಾರಿಗಳಿಂದ ಅಲಂಕರಿಸಲಾಗಿದ್ದು, ಇದು ಭಕ್ತಾಧಿಗಳ ಕಣ್ಮನ ಸೆಳೆಯಿತು. ಹೊರಭಾಗದಲ್ಲೂ ವಿಶೇಷವಾಗಿ ವಿದ್ಯುತ್ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.

ಬ್ರಹ್ಮರಥೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿ ಆಯೋಜಿಸಿದ್ದ ವೀರಗಾಸೆ ಕುಣಿತ, ತಮಟೆ ಸೇವೆ, ಡೊಳ್ಳುಕುಣಿತ, ಪೂಜಾ ಕುಣಿತ,ಚಿಲಿಪಿಲಿ ಗೊಂಬೆಗಳ ಕುಣಿತ ಮುಂತಾದ ಜನಪದ ಕಲಾತಂಡಗಳ ಪ್ರದರ್ಶನ ರಥೋತ್ಸವಕ್ಕೆ ಮತ್ತಷ್ಟು ಮೆರಗು ತಂದು ಕೊಟ್ಟಿತು. ಜಾನಪದ ಕಲಾ ತಂಡಗಳ ಪ್ರದರ್ಶನ ಭಕ್ತರನ್ನು ಆಕರ್ಷಿಸಿತು.

ಬ್ರಹ್ಮ ರಥೋತ್ಸವದಲ್ಲಿ ದೇವಸ್ಥಾನ ಪ್ರಧಾನ ಅರ್ಚಕರಾದ ರವೀಂದ್ರ, ಶರತ್ ಹಾಗೂ ಅರ್ಚಕರು, ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಲಕ್ಷ್ಮಿ ನರಸಿಂಹನ್, ದಿಲೀಪ್‌ಗೌಡ, ಅಬ್ಬೂರು ರಾಮಮೂರ್ತಿ, ಪಾರುಪತ್ತೆದಾರರು, ದೇವಾಲಯದ ಸಿಬ್ಬಂದಿ ಹಾಗೂ ಭಕ್ತರು ಸೇರಿದಂತೆ ಹಲವರು ಭಾಗವಹಿಸಿ ರಥೋತ್ಸವದ ಯಶಸ್ಸಿಗೆ ಕೈಜೋಡಿಸಿದರು. ದೇವಾಲಯದ ಆಡಳಿತ ಮಂಡಳಿಯಿಂದ ಭಕ್ತಾದಿಗಳಿಗೆ ಪ್ರಸಾದ, ನೀರು ಮಜ್ಜಿಗೆ, ಪಾನಕ ವಿತರಿಸಿದರು.

ಪೊಟೋ೧೯ಸಿಪಿಟಿ೩: ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರೆ ಮತ್ತು ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ಪೊಟೋ೧೯ಸಿಪಿಟಿ೫: ಶ್ರೀ ಕೆಂಗಲ್ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ