ಕನ್ನಡಪ್ರಭ ವಾರ್ತೆ ಮಡಿಕೇರಿ
ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷೆ ಲಲಿತಾ ರಾಘವನ್, ಮಹಿಳೆಯರ ಸ್ವಾವಲಂಬನೆಗೆ ಪೂರಕವಾದ ಯೋಜನೆಗಳನ್ನು ಇನ್ನರ್ ವೀಲ್ ವತಿಯಿಂದ ಮುಂದಿನ ವರ್ಷದಲ್ಲಿ ಜಾರಿಗೊಳಿಸುವುದಾಗಿ ಭರವಸೆ ನೀಡಿದರಲ್ಲದೇ, ಅರ್ಥಪೂರ್ಣ ಯೋಜನೆಗಳ ಮೂಲಕ ಸಮುದಾಯ ಸೇವೆಗೆ ಮುಂದಾಗುವುದಾಗಿ ನುಡಿದರು.
ಬೇರೆಯವರಿಗಾಗಿ ದಿನನಿತ್ಯ ಶ್ರಮಿಸುವ , ಬದುಕು ಸವೆಸುವ ಮಹಿಳೆಯರು ತನ್ನನ್ನು ತಾನು ಗಮನಿಸಿಕೊಳ್ಳುವ ದಿನಗಳು ಬಂದಿವೆ ಎಂದೂ ಲಲಿತಾ ರಾಘವನ್ ಹೇಳಿದರು.ಕಾರ್ಯದರ್ಶಿ ನಮಿತಾ ರೈ ವಂದಿಸಿದ ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಜಿಲ್ಲೆಯ ಮಾಜಿ ಅಧ್ಯಕ್ಷೆ ಪೂಣಿ೯ಮ ರವಿ , ನಿಕಟಪೂರ್ವ ಅಧ್ಯಕ್ಷೆ ಅಗ್ನೇಸ್ ಮುತ್ತಣ್ಣ, ನಿಕಟಪೂರ್ವ ಕಾರ್ಯದರ್ಶಿ ರಶ್ಮಿ ಪ್ರವೀಣ್ ಹಾಜರಿದ್ದರು.
ಶಫಾಲಿ ರೈ ಸಂಪಾದಕತ್ವದಲ್ಲಿ ಪ್ರಕಟವಾದ ಗಿರಿಶೃಂಗ ವಾರ್ತಾ ಸಂಚಿಕೆಯನ್ನು ರೋಟರಿ ಮಡಿಕೇರಿಯ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ ಅನಾವರಣಗೊಳಿಸಿದರು. ರೇಣುಕಾ ಸುಧಾಕರ್, ಲಕ್ಷ್ಮಿ ಈಶ್ವರ ಭಟ್, ಲತಾ ಸುಬ್ಬಯ್ಯ ಪ್ರಾರ್ಥಿಸಿದರು. ಡಾ. ಶುಭಾ ರಾಜೇಶ್, ದಿವ್ಯ ಮುತ್ತಣ್ಣ, ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ನಮಿತಾ ರೈ ವಂದಿಸಿದರು.