ಕ್ರೀಡಾಂಗಣ ಕಟ್ಟಲು ಸ್ಥಳ ಮಂಜೂರು

KannadaprabhaNewsNetwork |  
Published : Dec 14, 2025, 03:00 AM IST
13ಜಿಯುಡಿ1 | Kannada Prabha

ಸಾರಾಂಶ

ಅಮಾನಿ ಬೈರಸಾಗರ ಕೆರೆ ಕ್ರೀಡಾಂಗಣಕ್ಕೆ ಗುರುತಿಸಿರುವ ಜಾಗ ಬೆಟ್ಟ ಗುಡ್ಡಗಳಿರುವ ಕಾರಣದಿಂದ ನಿರ್ಮಾಣ ತಡವಾಗುತ್ತಿದೆ. ಇದೇ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೇ ಅನುಕೂಲವಾಗಲಿದೆ ಎಂಬ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಥಳ ಸಮತಟ್ಟು ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಪಟ್ಟಣದ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 6 ಎಕರೆ ಜಮೀನು ಮಂಜೂರಾಗಿದ್ದು, ಸದರಿ ಜಾಗಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಈ ಭಾಗದ ಕ್ರೀಡಾಪಟುಗಳು ಸೇರಿದಂತೆ ಅನೇಕರು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದಾರೆ. ಅವರ ಮನವಿ ಮೇರೆಗೆ ಗುಡಿಬಂಡೆ ಹೊರವಲಯದ ಅಮಾನಿ ಬೈರಸಾಗರ ಕೆರೆಯ ಬಳಿ 6 ಎಕರೆ ಜಮೀನನ್ನು ಸಹ ಗುರ್ತಿಸಲಾಗಿದೆ. ಜೊತೆಗೆ ಎರಡು ಕೋಟಿ ಅನುದಾನ ಸಹ ಬಿಡುಗಡೆಯಾಗಿದೆ ಎಂದರು.

ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣ

ಸುಮಾರು ಸದರಿ ಜಾಗದಲ್ಲಿ ಬೆಟ್ಟ ಗುಡ್ಡಗಳಿರುವ ಕಾರಣದಿಂದ ಕ್ರೀಡಾಂಗಣ ನಿರ್ಮಾಣ ತಡವಾಗುತ್ತಿದೆ. ಇದೇ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೇ ಅನುಕೂಲವಾಗುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದೇವೆ. ಬಿಡುಗಡೆಯಾಗಿರುವ ಅನುದಾನಕ್ಕೆ ಮತ್ತಷ್ಟು ಅನುದಾನ ಕೊಟ್ಟು ಸ್ಥಳ ಸಮತಟ್ಟು ಮಾಡಲು ತಿಳಿಸಿದ್ದೇನೆ. ಆದಷ್ಟು ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣಕ್ಕೆ ಬೇಕಾಗುವಂತಹ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.

ವಾಲ್ಮೀಕಿ ಭವನ ನಿರ್ಮಾಣಕ್ಕೆ ಹಣ

ಇನ್ನೂ ತಾಲೂಕು ಕೇಂದ್ರದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ಸಹ ಮಂಜೂರಾಗಿದೆ. ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿತ್ತು. ಈ ಸಂಬಂಧ ಕಳೆದೆರಡು ದಿನಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಸಹ ಕೇಳಿದ್ದೆ. ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ನೀಡಿದ್ದು, 2 ಕೋಟಿ ಅನುದಾನ ಒದಗಿಸಿದ್ದಾರೆ ಎಂದರು.

ಈ ವೇಳೆ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಆದಿರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಸಬ್ ಇನ್ಸ್ ಪೆಕ್ಟರ್ ಗಣೇಶ್, ಪಪಂ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಮುಖಂಡರಾದ ನರೇಂದ್ರ, ಅಂಬರೀಶ್, ಮಹದೇವಪ್ಪ, ನಂಜುಂಡಪ್ಪ, ರಿಯಾಜ್, ದ್ವಾರಕಿನಾಥನಾಯ್ಡು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ