6 ದಿನಗಳವರೆಗೆ ಜಾರಿಯಲ್ಲಿರುವ ಆದೇಶ । 14 ಜನರ ವಿರುದ್ಧ ಪ್ರಕರಣ ದಾಖಲು,
ನಗರದ ಹನುಮಂತಪ್ಪ ವೃತ್ತದ ಬಳಿ ಇರುವ ಬಡಾ ಮಕಾನ್ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ತೀವ್ರ ಸ್ವರೂಪ ಪಡೆದು ಕೊಂಡಿರುವ ಹಿನ್ನಲೆಯಲ್ಲಿ ತಾಲೂಕು ಆಡಳಿತ ನಿಷೇಧಾಜ್ಞೆ ಹೊರಡಿಸಿದೆ.
ತಾಲೂಕು ದಂಡಾಧಿಕಾರಿ ಡಾ. ಸುಮಂತ್ ಮಾ. 4ರ ಮಧ್ಯರಾತ್ರಿ 12 ಗಂಟೆಯಿಂದ ಮಾ. 10ರ ಮಧ್ಯರಾತ್ರಿ 12 ಗಂಟೆ ವರೆಗೆ ಅನ್ವಯವಾಗುವಂತೆ ಬಡಾ ಮಕಾನ್ ದರ್ಗಾವನ್ನು ಹೊರತುಪಡಿಸಿ ಅದರ ಪಕ್ಕದಲ್ಲಿರುವ ವಿವಾದಿತ ಸ್ಥಳಕ್ಕೆ ಯಾರೂ ಪ್ರವೇಶ ಮಾಡಬಾರದು. ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಕಟ್ಟಡ ತೆರವು, ಪ್ರತಿಭಟನೆ ಹಾಗೂ ಯಾವುದೇ ರೀತಿ ಚಟುವಟಿಕೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.ತಡೆಯಾಜ್ಞೆ: 330- 360 ಅಡಿ ಜಾಗಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೂ ಕೂಡ ದರ್ಗಾ ಆಡಳಿತ ಮಂಡಳಿ ಕೆಲವು ಪ್ರದೇಶವನ್ನು ಮಂಗಳವಾರ ಜೆಸಿಬಿಯಿಂದ ಸಮತಟ್ಟು ಮಾಡುವ ಜತೆಗೆ ಕೆಲವು ಅಂಗಡಿ ಮಳಿಗೆಗಳನ್ನು ತೆರವು ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಿಳಿಗೊಳಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ್ದಾರೆ.ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ನೊಂದ ಮಳಿಗೆ ಮಾಲೀಕರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ನ್ಯಾಯಾಲಯದಿಂದ ತಡೆಯಾಜ್ಞೆ ಇದ್ದರೂ ಮುಸ್ಲಿಂ ಸಮುದಾಯದವರು ಗುಂಪು ಕಟ್ಟಿಕೊಂಡು ಬಂದು ಅಂಗಡಿಗಳಿಗೆ ಹಾನಿ ಮಾಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಆಗಬೇಕೆಂದು ಆಗ್ರಹಿಸಿದರು.
-- ಬಾಕ್ಸ್ --
- ಜಿಲ್ಲಾಧ್ಯಕ್ಷರು, ಬಿಜೆಪಿ
ಜಿಲ್ಲಾ ರಕ್ಷಣಾಧಿಕಾರಿಗಳು ಎರಡು ಸಮುದಾಯಗಳ ಸಭೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಎಫ್ಐಆರ್ ಕೂಡ ಆಗಿದೆ. ಅದರಂತೆ ಪೊಲೀಸ್ ಇಲಾಖೆ ಕ್ರಮ ಜರುಗಿಸಲಿದೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.- ಮೀನಾ ನಾಗರಾಜ್
-----------------------------ನ್ಯಾಯಾಯದ ಆದೇಶ ಪಾಲನೆಚಿಕ್ಕಮಗಳೂರು: ಹೈಕೋರ್ಟ್ ಆದೇಶದಂತೆ ಬಡಾ ಮಕಾನ್ ಜಾಗದಲ್ಲಿ ಅನಧಿಕೃತವಾಗಿ ನೆಲಸಿದ್ದವರ ಮಳಿಗೆ ತೆರವು ಮಾಡಲಾಗಿದೆ. ಆದರೆ, ಈ ಪ್ರಕರಣಕ್ಕೆ ಸಂಬಂಧವಿಲ್ಲದ ವ್ಯಕ್ತಿ ನೀಡಿದ ದೂರು ಆಧರಿಸಿ ನಮ್ಮ ಸಮುದಾಯದ 14 ಜನರ ಮೇಲೆ ಪೊಲೀಸರು ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮುದಸಿರ್ ಪಾಷಾ ದೂರಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮಿಯಾ ಮಸೀದಿ ಅಥವಾ ಬಾಡಿಗೆದಾರನಿಗೆ ಸಂಬಂಧವೇ ಇಲ್ಲದ ವ್ಯಕ್ತಿಯೊಬ್ಬರು ನೀಡಿರುವ ದೂರು ಆಧರಿಸಿ ಪೊಲೀಸರು ಸಮಿತಿ ಪದಾಧಿಕಾರಿಗಳು ಮತ್ತು ಇತರರು ಸೇರಿ 14 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಊರಲ್ಲೇ ಇಲ್ಲದ ವ್ಯಕ್ತಿಗಳ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದು ಹೇಳಿದರು.
5 ಕೆಸಿಕೆಎಂ 1ಚಿಕ್ಕಮಗಳೂರಿನ ಬಡ ಮಕಾನ್ ದರ್ಗಾದ ಬಳಿ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿದವರ ವಿರುದ್ಧ ಕ್ರಮ ಆಗಬೇಕು ಹಾಗೂ ನೊಂದವರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.