ಭೂಸುರಕ್ಷಾ ಯೋಜನೆ ಜನರಿಗೆ ಅನುಕೂಲ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ

KannadaprabhaNewsNetwork |  
Published : Jan 19, 2025, 02:17 AM IST
ಪೊಟೋ: 19ಎಸ್‌ಎಂಜಿಕೆಪಿ01ಶಿವಮೊಗ್ಗ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ಶನಿವಾರ ಭೂಸುರಕ್ಷಾ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ಜನರ ಅನುಕೂಲಕ್ಕೆ ಅಗತ್ಯಗನುಗುಣವಾಗಿ ಒದಗಿಸಲು ಭೂ ಸುರಕ್ಷಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಭೂಸುರಕ್ಷಾ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಭೂಸುರಕ್ಷಾ ಯೋಜನೆಗೆ ಚಾಲನೆ । ದಾಖಲೆಗಳ ತಿದ್ದುಪಡಿ, ಕಳವು ಅಸಾಧ್ಯ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ಶಾಶ್ವತ ಡಿಜಿ ದಾಖಲೆಗಳಾಗಿ ಪರವರ್ತಿಸಿ, ಜನರ ಅನುಕೂಲಕ್ಕೆ ಅಗತ್ಯಗನುಗುಣವಾಗಿ ಒದಗಿಸಲು ಭೂ ಸುರಕ್ಷಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಇಲ್ಲಿನ ತಹಸೀಲ್ದಾರರ ಕಚೇರಿಯಲ್ಲಿ ಭೂಸುರಕ್ಷಾ ಯೋಜನೆಗೆ ಶನಿವಾರ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಾಖಲೆಗಳಿಗಾಗಿ ಬರುವ ಆಸ್ತಿಗಳ ಮಾಲೀಕರು ಸಂಬಂಧಿಸಿದ ಇಲಾಖೆಗಳ ದಾಖಲೆಗಳ ಸಂಗ್ರಹಾಲಯದಿಂದ ಪಡೆದುಕೊಳ್ಳಲು ಇರುವ ತೊಂದರೆ ಈ ಯೋಜನೆಯ ವ್ಯವಸ್ಥಿತ ಅನುಷ್ಠಾನದಿಂದ ನಿವಾರಣೆಗೊಳ್ಳಲಿದೆ. ಹಳೆಯ ದಾಖಲೆಗಳ ಸಂರಕ್ಷಣೆಯಿಂದಾಗಿ ದಾಖಲೆಗಳ ತಿದ್ದುಪಡಿ, ಕಳವು ಅಸಾಧ್ಯವಾಗಲಿದೆ ಎಂದರು.

ಆಸಕ್ತ ಭೂಮಿಯ ಮಾಲೀಕರು ತಮ್ಮ ಭೂದಾಖಲೆಗಳನ್ನು ನೇರವಾಗಿ ಡಿಜಿಟಲ್ ಮಾಧ್ಯಮದಿಂದ ಪಡೆದುಕೊಳ್ಳಲು ಸಾಧ್ಯವಾಗಲಿದೆ. ಇಂತಹ ಮಹತ್ವದ ಯೋಜನೆಯಡಿ ಜನಸಾಮಾನ್ಯರಿಗೆ ಯಾವುದೇ ಮದ್ಯವರ್ತಿಗಳಿಲ್ಲದೆ, ಕಚೇರಿಗಳಿಗೆ ಅಲೆದಾಟವಿಲ್ಲದೇ, ವಿಳಂಬಕ್ಕೆ, ಅಡೆತಡೆಗೆ ಅವಕಾಶವಿಲ್ಲದೇ ಭೂಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ತ್ವರಿತವಾಗಿ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದ ಅವರು, ಆಡಳಿತಕ್ಕೆ ಡಿ.ಜಿ.ಸ್ಪರ್ಶ ನೀಡುವುದರಿಂದ ಉತ್ತಮ ಜನಪರ ಆಡಳಿತ ನೀಡಲಾಗುತ್ತಿದೆ ಅಲ್ಲದೇ ಭೂಮಾಲೀಕರ ಒಡೆತನಕ್ಕೆ ಗ್ಯಾರಂಟಿ ನೀಡಲಾಗುತ್ತಿದೆ ಎಂದು ಹೇಳಿದರು.

ಹಳೆಯ ದಾಖಲೆಗಳನ್ನು ರಕ್ಷಿಸುವುದರ ಜತೆಗೆ ನಕಲಿ ಭೂ ದಾಖಲೆಗಳು ಸೃಷ್ಠಿಯಾಗುವುದನ್ನು ತಪ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ದಾಖಲೆಗಳು ಡಿಜಿಟಲ್ ರೂಪದಲ್ಲಿದ್ದರೆ ಅವುಗಳ ಆಯಸ್ಸು ಹೆಚ್ಚಾಗಿರುತ್ತದೆ ಅಲ್ಲದೇ ಕಾಗದ ರೂಪದಲ್ಲಿರುವ ಭೂ ದಾಖಲೆಗಳಿಗೆ ಹಾನಿಯಾಗುವ ಅಪಾಯ ಹೆಚ್ಚಿರುತ್ತದೆ. ಈ ಯೋಜನೆಯ ಅನುಷ್ಠಾನದಿಂದಾಗಿ ಆಸ್ತಿಗಳ ಮಾಲೀಕರು ತಮ್ಮ ದಾಖಲೆಗಳನ್ನು ಅಗತ್ಯಕ್ಕೆ ತಕ್ಕಂತೆ ಸುಲಭವಾಗಿ ಸರಳವಾಗಿ ಪಡೆದುಕೊಳ್ಳಬಹುದಾಗಿದೆ. ದಾಖಲೆಗಳಿಗಾಗಿ ಯಾವುದೇ ಕಚೇರಿಗೆ ಅಲೆದಾಡಬೇಕಾದ ಅಗತ್ಯವಿಲ್ಲ. ಇದರಿಂದಾಗಿ ಜನರಿಗೆ ಪ್ರಯಾಣ ಹಣ ಮತ್ತು ಸಮಯದ ಉಳಿತಾಯವಾಗಲಿದೆ ಎಂದು ನುಡಿದರು.

ಭವಿಷ್ಯದ ದಿನಗಳಲ್ಲಿ ವಿವಿಧ ಇಲಾಖಾ ವಿಭಾಗಗಳ ಡಿಜಿಟಲೀಕರಣಕ್ಕೂ ಈ ಯೋಜನೆಯು ನೆರವಿಗೆ ಬರುವ ನಿರೀಕ್ಷೆ ಇದೆ ಎಂದ ಅವರು, ಪ್ರಸ್ತುತ ಸಂದರ್ಭದಲ್ಲಿ ರಾಜ್ಯದ ಎಲ್ಲಾ ತಾಲೂಕು ಕಚೇರಿ, ಸರ್ವೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳಲ್ಲಿರುವ ಹಳೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದರು.

ಆಸ್ತಿ ದಾಖಲೆಗಳನ್ನು ಪಡೆಯಲು ನಾಗರಿಕರು ಎದುರಿಸುತ್ತಿರುವ ಸಮಸ್ಯೆ-ಸವಾಲುಗಳನ್ನು ಇತ್ಯರ್ಥಗೊಳಿಸಿ, ದಾಖಲೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿಯಾಗಲಿದೆ. ರಾಜ್ಯದ ವಿವಿಧ ತಾಲೂಕು ಕಚೇರಿಗಳಲ್ಲಿರುವ ಅತ್ಯಂತ ಪ್ರಮುಖವಾದ, ಸ್ವಾತಂತ್ರ್ಯಪೂರ್ವ ಮತ್ತು ನಂತರದ ಹಳೆಯ ಭೂದಾಖಲೆಗಳನ್ನು ಗಣಕೀಕರಣಗೊಳಿಸುವ ಕಾರ್ಯಕ್ಕೆ ಕಳೆದ ಸಾಲಿನಲ್ಲಿ ಚಾಲನೆ ನೀಡಲಾಗಿತ್ತು. ಇದೀಗ ಎರಡನೇ ಹಂತಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ ಒಂದು ವರ್ಷದೊಳಗಾಗಿ ಎಲ್ಲಾ ದಾಖಲೆಗಳ ಗಣಕೀಕರಣ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ