ಕನ್ನಡಪ್ರಭ ವಾರ್ತೆ ಸಾಗರ
ತಾಲ್ಲೂಕಿನ ಬ್ರಾಹ್ಮಣ ಬೇದೂರು ಗ್ರಾಮದ ಸರ್ವೆ ನಂ.೭೪ರಲ್ಲಿ ಕಳೆದ ನಾಲ್ಕು ವರ್ಷಗಳಿಂದ ಗುಡ್ಡದ ಮೇಲೆ ಅಕ್ರಮ ಗಣಿಗಾರಿಕೆ ನಡೆದಿದೆ. ಗಣಿಗಾರಿಕೆ ಹೆಸರಿ ನಲ್ಲಿ ಕಲ್ಲುಗಳನ್ನು ಕಿತ್ತೊಗೆದು ದೊಡ್ಡದೊಡ್ಡ ಹೊಂಡಗಳನ್ನು ಮಾಡಲಾಗಿದೆ. ಹೊಂಡವನ್ನು ಮುಚ್ಚುವ ಕೆಲಸ ಈತನಕ ಮಾಡಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ಗುಡ್ಡದ ಆಸುಪಾಸು ಅಕ್ರಮ ಗಣಿಗಾರಿಕೆ ನಡೆದ ಪರಿಣಾಮವಾಗಿ ಮಳೆಗಾಲದಲ್ಲಿ ವಿಪರೀತ ಗಾಳಿ ಮಳೆಗೆ ಗುಡ್ಡ ಕುಸಿಯುತ್ತಿದೆ. ಎರಡು ಮೂರು ವರ್ಷಗಳ ಹಿಂದೆ ಭೂ ಕುಸಿತದಿಂದ ನಮ್ಮ ಗ್ರಾಮದ ನಾಲ್ಕು ಮನೆಗಳು ಸಂಪೂರ್ಣ ನಾಶವಾಗಿತ್ತು. ಸರ್ಕಾರದ ಸಹಾಯಧನದಿಂದ ಮನೆ ನಿರ್ಮಿಸಿಕೊಳ್ಳಲಾಗಿದೆ. ಕಳೆದ ವರ್ಷ ಭೂ ಕುಸಿತ ಉಂಟಾಗಿ ಒಂದು ಮನೆ ಹಾನಿಯಾಗಿದೆ. ಆ ಸಂದರ್ಭದಲ್ಲಿ ತಡೆಗೋಡೆ ನಿರ್ಮಿಸಿ ಉಳಿದ ಮನೆಗಳನ್ನು ರಕ್ಷಣೆ ಮಾಡುವಂತೆ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿತ್ತು. ಗಾಳಿ ಮಳೆಗೆ ದಿನದಿಂದ ದಿನಕ್ಕೆ ಗುಡ್ಡ ಕುಸಿಯುತ್ತಿದೆ. ಗ್ರಾಮಸ್ಥರು ಆತಂಕದಲ್ಲಿ ದಿನ ಕಳೆಯುವ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆ ಕಳೆದುಕೊಂಡವರಿಗೆ ನಿಗದಿತ ಅವಧಿಯಲ್ಲಿ ಪರಿಹಾರ ನೀಡಿದರೆ ಅವರು ಬದುಕು ಕಟ್ಟಿಕೊಳ್ಳಲು ಸಾಧ್ಯವಾಗು ತ್ತದೆ. ೨೦೨೦-೨೧ರಲ್ಲಿ ಮಳೆಯಿಂದ ಮನೆ ಕಳೆದುಕೊಂಡವರಿಗೆ ಈ ತನಕ ಪೂರ್ಣ ಪ್ರಮಾಣದ ಪರಿಹಾರದ ಮೊತ್ತ ದೊರೆತಿಲ್ಲ. ಸರ್ಕಾರದಿಂದ ೫ ಲಕ್ಷ ರು. ಪರಿಹಾರ ಬರುತ್ತದೆ ಎಂದು ಸಾಲ ಮಾಡಿ, ಬಂಗಾರ ಅಡವಿಟ್ಟು ಮನೆ ಕಟ್ಟಿಕೊಂಡಿದ್ದಾರೆ. ಈ ತನಕ ಅವರಿಗೆ ಪರಿಹಾರ ಬಂದಿಲ್ಲ. ಅಧಿಕಾರಿಗಳು ಸರ್ಕಾರ ಬದಲಾಗಿದೆ, ಹಣವಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಶಾಸಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಡಾ.ರಾಮಚಂದ್ರಪ್ಪ ಮನೆಘಟ್ಟ, ಶಿವು ಮೈಲಾರಿಕೊಪ್ಪ, ಜಗದೀಶ್ ಕುಮಾರ್, ರಾಮಚಂದ್ರ, ಚಂದ್ರು ಪೂಜಾರಿ ಹಾಜರಿದ್ದರು.