ಸುಳ್ಳಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ ಭಾಷಾ ಸಮಸ್ಯೆ

KannadaprabhaNewsNetwork |  
Published : Jun 28, 2025, 12:18 AM IST
26ಬ್ಯಾಕೋಡು01 ಬಾಷೆ ಅಡಚನೆಯಿಂದ ಯೂನಿಯನ್ ಬ್ಯಾಂಕ್ ನಲ್ಲಿ ಕಾಯುತ್ತಿರುವ ಗ್ರಾಹಕರು. | Kannada Prabha

ಸಾರಾಂಶ

ಇಲ್ಲಿಯ ಸಮೀಪ ಸುಳ್ಳಳ್ಳಿ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಕೇವಲ ಹಿಂದಿ ಭಾಷೆಯಲ್ಲಿ ವ್ಯವಹರಿಸುತ್ತಿರುವುದು ಸ್ಥಳೀಯ ಗ್ರಾಹಕರು ಮತ್ತು ಸಹೋದ್ಯೋಗಿಗಳಿಗೆ ತೀವ್ರ ತೊಂದರೆಯುಂಟುಮಾಡಿದೆ. ಈ ಭಾಗದ ಬಹುತೇಕ ಜನರು ಕನ್ನಡ ಭಾಷೆ ಮಾತನಾಡುವವರಾಗಿದ್ದು, ಇದರಿಂದ ಸಾಲ ಪಡೆಯಲು, ಮರುಪಾವತಿ ಮಾಡಲು ಮತ್ತು ವ್ಯವಸ್ಥಾಪಕರೊಂದಿಗೆ ಸಂವಹನ ನಡೆಸಲು ಭಾರಿ ಅಡಚಣೆಯಾಗುತ್ತಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಯಾಕೋಡು: ಇಲ್ಲಿಯ ಸಮೀಪ ಸುಳ್ಳಳ್ಳಿ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಕೇವಲ ಹಿಂದಿ ಭಾಷೆಯಲ್ಲಿ ವ್ಯವಹರಿಸುತ್ತಿರುವುದು ಸ್ಥಳೀಯ ಗ್ರಾಹಕರು ಮತ್ತು ಸಹೋದ್ಯೋಗಿಗಳಿಗೆ ತೀವ್ರ ತೊಂದರೆಯುಂಟುಮಾಡಿದೆ. ಈ ಭಾಗದ ಬಹುತೇಕ ಜನರು ಕನ್ನಡ ಭಾಷೆ ಮಾತನಾಡುವವರಾಗಿದ್ದು, ಇದರಿಂದ ಸಾಲ ಪಡೆಯಲು, ಮರುಪಾವತಿ ಮಾಡಲು ಮತ್ತು ವ್ಯವಸ್ಥಾಪಕರೊಂದಿಗೆ ಸಂವಹನ ನಡೆಸಲು ಭಾರಿ ಅಡಚಣೆಯಾಗುತ್ತಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಹಾಲಿ ವ್ಯವಸ್ಥಾಪಕರನ್ನು ವರ್ಗಾಯಿಸಿ, ಕನ್ನಡ ಬಲ್ಲ ವ್ಯವಸ್ಥಾಪಕರನ್ನು ನೇಮಿಸುವಂತೆ ಆಗ್ರಹಿಸಿದ್ದಾರೆ. "ನಮ್ಮ ಭಾಗದಲ್ಲಿ ಬಹುತೇಕರು ಕನ್ನಡ ಮಾತನಾಡುವವರಾಗಿದ್ದಾರೆ. ವ್ಯವಸ್ಥಾಪಕರು ಹಿಂದಿಯಲ್ಲಿ ಮಾತ್ರ ಮಾತನಾಡುತ್ತಿರುವುದರಿಂದ ನಮ್ಮ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಸಮಸ್ಯೆ ಎದುರಿಸುತ್ತಿದ್ದೇವೆ. ಸಾಲದ ಅರ್ಜಿ, ಮರುಪಾವತಿ ಕುರಿತು ಮಾಹಿತಿ ಪಡೆಯುವುದು, ಬ್ಯಾಂಕ್ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವುದು ಎಲ್ಲವೂ ಕಷ್ಟಕರವಾಗಿದೆ " ಎಂದು ಸ್ತ್ರೀ ಶಕ್ತಿ ಸಂಘದ ಸದಸ್ಯರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಇದೇ ಭಾಷಾ ಸಮಸ್ಯೆ, ಬ್ಯಾಂಕಿನ ಇತರೆ ಸಿಬ್ಬಂದಿಗೂ ತಲೆನೋವಾಗಿ ಪರಿಣಮಿಸಿದೆ. ಗ್ರಾಹಕರು ಮತ್ತು ವ್ಯವಸ್ಥಾಪಕರ ನಡುವೆ ಸಂವಹನ ಸೇತುವಾಗಿ ಕಾರ್ಯನಿರ್ವಹಿಸಲು ಸಹೋದ್ಯೋಗಿಗಳು ಪರದಾಡುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಬ್ಯಾಂಕಿನ ದೈನಂದಿನ ಕಾರ್ಯಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತಿದ್ದು, ಗ್ರಾಹಕರು ಗಂಟೆಗಟ್ಟಲೆ ಕಾಯುವ ಪರಿಸ್ತಿತಿ ಒದಗಿದೆ ಎಂದು ಜೀನೇಂದ್ರ ಜೈನ್ ಸಸಿಗೊಳ್ಳಿ ಆರೋಪಿಸಿದ್ದಾರೆ.

ಜನರ ಭಾಷಾ ಹಕ್ಕಿಗೆ ಧಕ್ಕೆ ತರುತ್ತಿರುವ ಈ ಸಮಸ್ಯೆಯನ್ನು ಬ್ಯಾಂಕ್ ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೂಡಲೇ ವ್ಯವಸ್ಥಾಪಕರನ್ನು ವರ್ಗಾಯಿಸಿ, ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸದಿದ್ದರೆ ಬ್ಯಾಂಕಿನ ಎದುರು ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ