ಶ್ರಾವಣದ ಕಡೆಯ ಸೋಮವಾರ: ಮಠ, ದೇಗುಲಗಳಲ್ಲಿ ಭಕ್ತಿ ಸಂಭ್ರಮ

KannadaprabhaNewsNetwork |  
Published : Sep 08, 2026, 02:30 AM IST
ಶ್ರಾವಣ ಮಾಸದ ಕಡೆಯ ಸೋಮವಾರದ ಅಂಗವಾಗಿ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ನಡೆದ ವಿಶೇಷ ಅಲಂಕಾರ ಪೂಜೆ. ಭಕ್ತರು ಸರದಿಯಲ್ಲಿ ನಿಂತು ದರ್ಶನ ಪಡೆದರು. | Kannada Prabha

ಸಾರಾಂಶ

ಶ್ರಾವಣ ಮಾಸದ ಕಡೆಯ ಸೋಮವಾರದ ಅಂಗವಾಗಿ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಮಠ, ದೇವಸ್ಥಾನಗಳಲ್ಲಿ ಸೋಮವಾರ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮ ಹಾಗೂ ವಿವಿಧ ಸೇವಾ ಕಾರ್ಯಗಳು ಶ್ರದ್ಧಾ-ಭಕ್ತಿಯಿಂದ ನಡೆದವು.

ಹುಬ್ಬಳ್ಳಿ:

ಶ್ರಾವಣ ಮಾಸದ ಕಡೆಯ ಸೋಮವಾರದ ಅಂಗವಾಗಿ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಮಠ, ದೇವಸ್ಥಾನಗಳಲ್ಲಿ ಸೋಮವಾರ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮ ಹಾಗೂ ವಿವಿಧ ಸೇವಾ ಕಾರ್ಯಗಳು ಶ್ರದ್ಧಾ-ಭಕ್ತಿಯಿಂದ ನಡೆದವು.

ಬೆಳಗ್ಗೆಯಿಂದಲೇ ನಗರದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಐತಿಹಾಸಿಕ ಸಿದ್ಧಾರೂಢ ಮಠ, ಮೂರು ಸಾವಿರಮಠ, ಉಣಕಲ್ಲ ಸಿದ್ದಪ್ಪಜ್ಜನ ಮಠ, ಚಂದ್ರಮೌಳೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಅಭಿಷೇಕ:

ವಿವಿಧ ದೇವಾಲಯಗಳಲ್ಲಿ ಶಿವಲಿಂಗಕ್ಕೆ ವಿಶೇಷ ಅಭಿಷೇಕ, ರುದ್ರಾಭಿಷೇಕ, ಬಿಲ್ವಪತ್ರ ಅರ್ಚನೆ ಹಾಗೂ ಪುಷ್ಪಾಲಂಕಾರ ನೆರವೇರಿಸಲಾಯಿತು. ದೇವಾಲಯಗಳ ಪ್ರವೇಶ ದ್ವಾರ ಹಾಗೂ ಆವರಣಗಳನ್ನು ಹೂವು, ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ವಿಶೇಷ ದರ್ಶನ ಹಾಗೂ ಪೂಜೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

ಜಾನುವಾರುಗಳಿಗೂ ಪೂಜೆ:

ಗ್ರಾಮೀಣ ಭಾಗದಲ್ಲಿ ರೈತಾಪಿ ವರ್ಗದ ಜನರು ತಮ್ಮ ಮನೆಯಲ್ಲಿ ಸಾಕಿದ ಎತ್ತು ಹಾಗೂ ಆಕಳುಗಳಿಗೆ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸುವ ಮೂಲಕ ಶ್ರಾವಣ ಸೋಮವಾರ ಆಚರಿಸಿದರು. ಬಹುತೇಕ ಮಠ, ದೇವಸ್ಥಾನಗಳಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಂಘಟನೆಗಳ ವತಿಯಿಂದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಸಿದ್ಧಾರೂಢ ಮಠದಲ್ಲಿ ರಶ್‌!

ಸಿದ್ಧಾರೂಢ ಮಠದಲ್ಲಿ ಶ್ರಾವಣ ಸೋಮವಾರದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ನಡೆದವು. ಶ್ರೀಸಿದ್ಧಾರೂಢ ಸ್ವಾಮಿಗಳ ಹಾಗೂ ಗುರುನಾಥರೂಢದ ಗದ್ದುಗೆಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ಮಠಕ್ಕೆ ಭಕ್ತರ ಆಗಮನ ಹೆಚ್ಚಾಗಿತ್ತು. ಭಜನೆ, ಶಿವನಾಮ ಸ್ಮರಣೆ ಹಾಗೂ ಪಂಚಾಕ್ಷರಿ ಮಂತ್ರ ಪಠಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

371(ಜೆ) ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಕೆರೆ ತುಂಬಿಸುವ ಯೋಜನೆಯ ಪೈಪ್‌ಲೈನ್‌ನಿಂದ ಅಕ್ರಮ ನೀರು ಬಳಕೆ!