ಚಾಮರಾಜನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರಸ್ಥರಲ್ಲಿ ಮಂದಹಾಸ

KannadaprabhaNewsNetwork |  
Published : Nov 01, 2024, 12:01 AM IST
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಆಚರಣೆಗೆ ಸಿದ್ದತೆ | Kannada Prabha

ಸಾರಾಂಶ

ಮೂರು ದಿನಗಳ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಆಚರಣೆಗೆ ಜಿಲ್ಲೆಯಾದ್ಯಂತ ಜನರು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಪಟಾಕಿ ವ್ಯಾಪಾರ ರಂಗೇರಿದೆ. ಪಟಾಕಿ ಮಳಿಗೆಗಳತ್ತ ಜನರು ಹೆಜ್ಜೆ ಹಾಕುತ್ತಿದ್ದಾರೆ.

ಮೂರು ದಿನಗಳ ಹಬ್ಬಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ । ಪಟಾಕಿ ಮಳಿಗೆಗಳಿಗೆ ದಾಂಗುಡಿ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮೂರು ದಿನಗಳ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಆಚರಣೆಗೆ ಜಿಲ್ಲೆಯಾದ್ಯಂತ ಜನರು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಪಟಾಕಿ ವ್ಯಾಪಾರ ರಂಗೇರಿದೆ. ಪಟಾಕಿ ಮಳಿಗೆಗಳತ್ತ ಜನರು ಹೆಜ್ಜೆ ಹಾಕುತ್ತಿದ್ದಾರೆ.

ಗುರುವಾರದಿಂದ ದೀಪಾವಳಿ ಪ್ರಾರಂಭವಾಗಲಿದ್ದು, ಇದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಗಳತ್ತ ಮುಖಮಾಡಿ ಸಾಮಾಗ್ರಿಗಳನ್ನು ಕೊಂಡುಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು. ಈ ಸಂಭ್ರಮದ ದೀಪಾವಳಿ ಆಚರಣೆಗೆ ಮಳೆರಾಯನು ವಿರಾಮ ನೀಡಿರುವುದರಿಂದ ಜನರು ಅದರಲ್ಲೂ ಮಕ್ಕಳು ಬಹಳ ಖುಷಿಯಿಂದ ತಮ್ಮ ಪೋಷಕರ ಜೊತೆ ಪಟಾಕಿ ಅಂಗಡಿಗಳಿಗೆ ಬಂದು ಪಟಾಕಿಗಳನ್ನು ಖರೀದಿಸುತ್ತಿದ್ದರು. ದೀಪಾವಳಿಯ ಸಂದರ್ಭದಲ್ಲಿ ಸಂಪತ್ತು ಮತ್ತು ಸಮೃದ್ಧಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ.

ಪಟಾಕಿ ವ್ಯಾಪಾರ ಬಲು ಜೋರು:

ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಬುಧವಾರ ಅಂಗಡಿ ಬೀದಿಗಳಲ್ಲಿ ವ್ಯಾಪಾರದ ಭರಾಟೆ ಜೋರಾಗಿಯೇ ಇತ್ತು. ಅದರಲ್ಲೂ ಮೆಗಾ ಕಾಂಪ್ಲೆಕ್ಸ್ ಪಕ್ಕದ ಮೈದಾನದಲ್ಲಿ ತೆರೆದಿರುವ ಪಟಾಕಿ ಅಂಗಡಿಗಳ ಮುಂದೆ ವ್ಯಾಪಾರದ ಭರಾಟೆ ಬಲು ಜೋರಾಗಿಯೇ ಇತ್ತು. ಹೂವು, ಬಾಳೆಹಣ್ಣು, ಅಲಂಕಾರಿಕ ವಸ್ತುಗಳು ಸೇರಿದಂತೆ ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿ ಬೆಲೆ ಏರಿಕೆ ಬಿಸಿ ತಟ್ಟುತ್ತಿದ್ದರೂ, ಸಡಗರದ ದೀಪಾವಳಿಗೆ ಜನರು ವಸ್ತುಗಳನ್ನು ಹಾಗೂ ಮಣ್ಣಿನ ಹಣತೆ ದೀಪಗಳನ್ನು ಖರೀದಿಸುತ್ತಿದ್ದದು ಮಾರುಕಟ್ಟೆಯಲ್ಲಿ ಕಂಡು ಬಂತು.

ಗುರುವಾರ ಬೆಳಿಗ್ಗೆಯಿಂದಲೇ ವಸ್ತುಗಳನ್ನು ಖರೀದಿಸಲು ನಗರದ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಹಳೆ ಖಾಸಗಿ ಬಸ್ ನಿಲ್ದಾಣದ ಅಂಗಡಿಗಳು, ಮೆಗಾ ಕಾಂಪ್ಲೆಕ್ಸ್ ಬಳಿ ತೆರೆದಿರುವ ಪಟಾಕಿ ಅಂಗಡಿಗಳಿಗೆ ಮುಗಿಬಿದ್ದರು. ಜಿಲ್ಲಾಡಳಿತ ಈಗಾಗಲೇ ಹಸಿರು ಪಟಾಕಿಗಳನ್ನು ಹೆಚ್ಚು ಉಪಯೋಗಿಸುವಂತೆ ತಿಳಿಸಿದೆ. ರಾಜಸ್ತಾನಿ ಭಾಂದವರಿಗೆ, ಚಿನ್ನ ಮತ್ತು ಬೆಳ್ಳಿ ವ್ಯಾಪಾರಗಾರರಿಗೆ ದೀಪಾವಳಿ ದೊಡ್ಡ ಹಬ್ಬ. ಅದಕ್ಕಾಗಿ ತಮ್ಮ ಅಂಗಡಿ ಮಳಿಗೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ, ಪೂಜೆ ನೆರವೇರಿಸಿ, ತಮ್ಮ ಗ್ರಾಹಕರಿಗೆ ಸಿಹಿ ವಿತರಿಸುತ್ತಿದ್ದರು. ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರನ ದೀಪಾವಳಿ ಜಾತ್ರೆ ಮತ್ತು ಮಹಾ ರಥೋತ್ಸವ ನಡೆಯುತ್ತಿರುವುದರಿಂದ ಭಕ್ತರು ತಂಡೋಪತಂಡವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!