ಕರ್ನಾಟಕ ದರ್ಶನ ಚಿಣ್ಣರ ಪ್ರವಾಸಕ್ಕೆ ಚಾಲನೆ

KannadaprabhaNewsNetwork |  
Published : Feb 11, 2024, 01:48 AM IST
ಫೋಟೋ- 10ಜಿಬಿ8 ಮತ್ತು 10ಜಿಬಿ9 | Kannada Prabha

ಸಾರಾಂಶ

ಕಲಬುರಗಿ ದಕ್ಷಿಣ ಮತ್ತು ಉತ್ತರ ತಾಲೂಕಿನ ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿ ಶುಭಕೋರಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ "ಕರ್ನಾಟಕ ದರ್ಶನ " ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಕಲಬುರಗಿ ದಕ್ಷಿಣ ಮತ್ತು ಉತ್ತರ ತಾಲೂಕಿನ ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.

ಶಾಲಾ ಮಕ್ಕಳೊಂದಿಗೆ ಪ್ರವಾಸ ಕುರಿತು ಕುಶಲೋಪರಿ ವಿಚಾರಿಸಿದ ಸಚಿವರು, ಪ್ರವಾಸಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಮಕ್ಕಳೊಂದಿಗೆ ಗ್ರೂಪ್ ಪೋಟೋ ತೆಗೆಸಿಕೊಂಡರು. ಪ್ರವಾಸಕ್ಕೆ ಹೊರಟ ಶಾಲಾ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿದ್ದು, ಹಸಿರು ಟಿಶರ್ಟ್ ನಲ್ಲಿ ಕಂಗೊಳಿಸಿದರು.

824 ಮಕ್ಕಳ ಪ್ರಯಾಣ: ಕರ್ನಾಟಕ ದರ್ಶನ ಅಂಗವಾಗಿ ಪ್ರಸಕ್ತ 2023-24ನೇ ಸಾಲಿಗೆ ಜಿಲ್ಲೆಯ 8ನೇ ತರಗತಿಯ 824 ಶಾಲಾ ಮಕ್ಕಳು ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯಿಂದ ಶನಿವಾರ ಕಲಬುರಗಿ ದಕ್ಷಿಣ ಮತ್ತು ಉತ್ತರ ವಲಯದ 208 ಮಕ್ಕಳು ಪ್ರಯಾಣ ಬೆಳಸಿದರು. ಫೆ.11ಕ್ಕೆ ಆಳಂದ ಮತ್ತು ಅಫಜಲ್ಪುರ ತಾಲೂಕಿನಿಂದ 204 ಮಕ್ಕಳು, ಫೆ.12ಕ್ಕೆ ಜೇವರ್ಗಿ ಮತ್ತು ಚಿತ್ತಾಪುರದಿಂದ‌ 206 ಮಕ್ಕಳು ಹಾಗೂ ಫೆ.13ಕ್ಕೆ ಚಿಂಚೋಳಿ ಮತ್ತು ಸೇಡಂ ತಾಲೂಕಿನಿಂದ 206 ಮಕ್ಕಳು ಪ್ರವಾಸ ಮಾಡಲಿದ್ದಾರೆ. ಪ್ರತಿ ತಾಲೂಕಿಗೆ 5 ಬಸ್ ಗಳ ವ್ಯವಸ್ಥೆ ಮಾಡಿದ್ದು, ಪ್ರಯಾಣದ ಸಂದರ್ಭದಲ್ಲಿ ವಸತಿ, ಊಟೋಪಚಾರಕ್ಕೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಎಲ್ಲೆಲ್ಲಿ ಪ್ರವಾಸ?: ಮೊದಲನೇ ದಿನ ವಿಜಯಪುರ ಗೋಳಗುಮ್ಮಟ ನೋಡಿಕೊಂಡು ತಂಡ ಅಲ್ಲಿಯೆ ವಾಸ್ತವ್ಯ ಮಾಡಲಿದೆ. ಎರಡನೇ ದಿನ ಬದಾಮಿ, ಪಟ್ಟದಕಲ್ಲು ವೀಕ್ಷಿಸಿ ಐಹೊಳೆಯಲ್ಲಿ ವಾಸ್ತವ್ಯ ಮಾಡಲಿದೆ. ಮೂರನೇ ದಿನ ವಿಶ್ವ ಪ್ರಸಿದ್ಧ ಹಂಪಿ, ತುಂಗಭದ್ರ ಆಣೆಕಟ್ಟು ಕಣ್ತುಂಬಿಕೊಂಡು ಹೊಸಪೇಟೆಯಲ್ಲಿ ತಂಗಲಿದೆ. ನಾಲ್ಕನೇ ದಿನ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಂಜನಾದ್ರಿ ಬೆಟ್ಟ ವೀಕ್ಷಿಸಿ ಮರಳಿ ಕಲಬುರಗಿಯತ್ತ ಪ್ರಯಾಣ ಬೆಳಸಲಿದೆ.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಸತೀಷಕುಮಾರ ಡಿ.ಡಿ.ಪಿ.ಐ. ಸಕ್ರೆಪ್ಪಗೌಡ ಬಿರಾದಾರ, ಕೆ.ಎಸ್.ಟಿ.ಡಿ.ಸಿ. ನಿಗಮದ ಸಹಾಯಕ ವ್ಯವಸ್ಥಾಪಕ ಯಶವಂತರಾಯ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ