ಕಬ್ಬಹಳ್ಳಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರಕ್ಕೆ ಚಾಲನೆ

KannadaprabhaNewsNetwork |  
Published : Aug 27, 2024, 01:32 AM IST
 ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ | Kannada Prabha

ಸಾರಾಂಶ

ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.

ಗ್ರಾಪಂ ಮಾಜಿ ಅಧ್ಯಕ್ಷ ಸಿರಿಯಪ್ಪ ಮತ್ತು ಕೃಷಿ ಮಹಾವಿದ್ಯಾಲಯ ಚಾಮರಾಜನಗರದ ವಿಶೇಷ ಅಧಿಕಾರಿ ಡಾ.ಸಿ.ದೊರೆಸ್ವಾಮಿ ನೇಗಿಲಿಗೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಸಂಯೋಜಕ ಡಾ.ಜಿ. ನಾಗೇಶ್, ಕೃಷಿ ವಿದ್ಯಾರ್ಥಿಗಳು ಮೂರು ತಿಂಗಳ ಕಾಲ ರೈತರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಅವರಿಗೆ ಕಬ್ಬಹಳ್ಳಿ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೃಷಿ ಮಹಾವಿದ್ಯಾಲಯ ಚಾಮರಾಜನಗರದ ವಿಶೇಷ ಅಧಿಕಾರಿ ಡಾ.ಸಿ. ದೊರೆಸ್ವಾಮಿ ಮಾತನಾಡಿ, ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನವನ್ನು ರೈತರಿಗೆ ಪರಿಚಯ ಮಾಡುತ್ತಾರೆ. ರೈತರಿಂದ ಕೃಷಿ ಬಗ್ಗೆ ಕಲಿಯುತ್ತಾರೆ. ಅವರಿಗೆ ಸಹಕಾರ ನೀಡಬೇಕು ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸಿರಿಯಪ್ಪ ಮಾತನಾಡಿ, ಕೃಷಿ ವಿದ್ಯಾರ್ಥಿಗಳಿಗೆ ಸಹಕಾರ ನೀಡುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಶಿಬಿರದ ಸಹ ಸಂಯೋಜಕ ಡಾ.ಎನ್. ಉಮಾಶಂಕರ್, ಗ್ರಾಪಂ ಮಾಜಿ ಸದಸ್ಯರಾದ ವೃಷಭೇಂದ್ರಪ್ಪ, ಹಾಲು ಉತ್ಪಾದಕರ ಸಂಘ ಸದಸ್ಯರಾದ ಸುರೇಶ ಮತ್ತು ಗ್ರಾಪಂ ಮಾಜಿ ಸದಸ್ಯರಾದ ಮಹೇಶ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!