ಕನ್ನಡಪ್ರಭ ವಾರ್ತೆ ಹೊಸಕೋಟೆ
ಬಳಿಕ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜಕೀಯ, ಧಾರ್ಮಿಕ, ಶೈಕ್ಷಣಿಕ, ಕೃಷಿ, ಕೈಗಾರಿಕೆ, ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ತನ್ನೊಳಗೆ ಅಡಗಿಸಿಕೊಂಡಿರುವ ಸಮೃದ್ಧ ಜಿಲ್ಲೆಯಾಗಿದೆ. ಇಂತಹ ಜಿಲ್ಲೆಯ ವೈಶಿಷ್ಟ್ಯಗಳು, ಸಾಧಕರು, ಜನಜೀವನ, ಪರಂಪರೆ ಹಾಗೂ ಅಭಿವೃದ್ಧಿಯ ಪಥವನ್ನು ಒಂದೇ ಕೃತಿಯಲ್ಲಿ ದಾಖಲಿಸಿರುವ ಕನ್ನಡಪ್ರಭದ ಈ ವಿಶೇಷ ಸಂಚಿಕೆ ಅಭಿನಂದನಾರ್ಹವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದು ಕೇವಲ ಪುಸ್ತಕವಲ್ಲ, ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಸಾಧನೆಗಳನ್ನು ದಾಖಲಿಸುವ ಅಮೂಲ್ಯ ದಾಖಲೆ. ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗುವ ಈ ಕೃತಿ ಸಂಗ್ರಹಯೋಗ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮ ಗ್ರಂಥಾಲಯದಲ್ಲಿ ಇಟ್ಟುಕೊಳ್ಳಬೇಕಾದ ಮೌಲ್ಯಯುತ ಪ್ರಕಟಣೆಯಾಗಿದೆ ಎಂದು ಹೇಳಿದರು.ಕನ್ನಡಪ್ರಭ ದಿನಪತ್ರಿಕೆ ನಮ್ಮ ತಂದೆ ವೆಂಕಟರಮಣಗೌಡ ಅವರ ಕಾಲದಿಂದಲೇ ನಮ್ಮ ಕುಟುಂಬದ ನೆಚ್ಚಿನ ಪತ್ರಿಕೆಯಾಗಿದೆ. ಹಲವು ದಶಕಗಳಿಂದ ಪತ್ರಿಕೆ ತನ್ನ ವಿಶ್ವಾಸಾರ್ಹತೆ, ನಿಷ್ಪಕ್ಷಪಾತ ಧೋರಣೆ ಹಾಗೂ ಪತ್ರಿಕಾ ಧರ್ಮವನ್ನು ಕಾಪಾಡಿಕೊಂಡು ಓದುಗರ ವಿಶ್ವಾಸ ಗಳಿಸಿದೆ. ಕಾಲಕ್ಕೆ ತಕ್ಕಂತೆ ಹೊಸತನವನ್ನು ಅಳವಡಿಸಿಕೊಂಡು ಡಿಜಿಟಲ್ ಯುಗದಲ್ಲಿಯೂ ಮುದ್ರಣ ಮಾಧ್ಯಮದ ಮಹತ್ವವನ್ನು ಉಳಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಗ್ರಾಮಾಂತರ ಭಾಗದ ಜನರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು, ಸಾಧನೆಗಳು ಹಾಗೂ ಸಂಸ್ಕೃತಿಯನ್ನು ನಿರಂತರವಾಗಿ ಸಮಾಜದ ಮುಂದೆ ತರುವಲ್ಲಿ ಕನ್ನಡಪ್ರಭ ಮಹತ್ವದ ಪಾತ್ರ ವಹಿಸುತ್ತಿದ್ದು, ಇಂತಹ ಪ್ರಯತ್ನಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.