ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ

KannadaprabhaNewsNetwork |  
Published : Jun 16, 2025, 05:20 AM IST
ಹೂವಿನಹಡಗಲಿ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ತಹಸೀಲ್ದಾರ್‌ ಜಿ.ಸಂತೋಷಕುಮಾರ. | Kannada Prabha

ಸಾರಾಂಶ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.

ಚಿಕ್ಕ ವಯಸ್ಸಿನಲ್ಲೇ ದುಡಿಯುವ ಕೆಲಸಕ್ಕೆ ಹೋಗುವುದನ್ನು ತಪ್ಪಿಸಬೇಕು: ತಹಸೀಲ್ದಾರ್

ಕನ್ನಡಪ್ರಭ ವಾರ್ತೆ ಹೂವಿನಹಡಗಲಿ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಹಸೀಲ್ದಾರ್ ಜಿ. ಸಂತೋಷಕುಮಾರ್ ಹೇಳಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ, ವಕೀಲರ ಸಂಘ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರ್ಥಿಕ ಸ್ಥಿತಿ ಬೇರೆ ಬೇರೆ ಕಾರಣಗಳಿಂದ ಮಕ್ಕಳು ಶಾಲೆಯಿಂದ ಹೊರಗುಳಿದು ಕೃಷಿ, ಗ್ಯಾರೇಜ್, ಹೋಟೆಲ್ ಮುಂತಾದ ಕಡೆ ಚಿಕ್ಕ ವಯಸ್ಸಿನಲ್ಲೇ ದುಡಿಯುವ ಕೆಲಸಕ್ಕೆ ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದರು.

ಯಾರಾದರೂ ಚಿಕ್ಕ ವಯಸ್ಸಿನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸ ಮಾಡುವುದು ಕಂಡು ಬಂದರೆ ಕೂಡಲೇ ಸಂಬಂಧಪಟ್ಟ ಇಲಾಖೆಗೆ ತಿಳಿಸಿ, ಬಾಲಕರನ್ನು ಕೆಲಸಕ್ಕೆ ಸೇರಿಸಿಕೊಂಡ ಮಾಲೀಕರಿಗೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ಹೇಳಿದರು.

ವಕೀಲರಾದ ಎಂ.ಎನ್. ಮಂಜುನಾಥ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ತಾಪಂ ಇಒ ಎಂ. ಉಮೇಶ್ ವಿಶ್ವಸಂಸ್ಥೆ ಯುನೆಸೆಫ್ ಬಗ್ಗೆ ಮಾಹಿತಿ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಜಿ. ವಸಂತ ಕುಮಾರ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ, ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಬ್, ಕ್ಷೇತ್ರ ಸಮನ್ವಯಾಧಿಕಾರಿ ಎ. ಕೋಟೆಪ್ಪ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಪಿ.ಎಂ. ಅಶೋಕ, ವಕೀಲರಾದ ಪರಮೇಶ್ವರ ನಾಯ್ಕ, ರಾಜಭಕ್ಷಿ ಇತರರಿದ್ದರು.

ಪಟ್ಟಣದ ಸಿಆರ್‌ಪಿ ಚೆನ್ನವೀರನ ಗೌಡ , ಮೌನೇಶ್, ಎಸ್.ಎಂ. ಕೂಡ್ಲಯ್ಯ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ