ಉದ್ಯೋಗ ವಾಹಿನಿಗೆ ಅಭಿಯಾನಕ್ಕೆ ಚಾಲನೆ

KannadaprabhaNewsNetwork |  
Published : Oct 22, 2024, 12:09 AM IST
ಮೂಡಲಗಿ: ಪಟ್ಟಣದ ತಾಲೂಕಾ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಉದ್ಯೋಗ ವಾಹಿನಿಗೆ ತಾಪಂ ಇಒ ಎಫ್.ಜಿ.ಚಿನ್ನನವರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.   | Kannada Prabha

ಸಾರಾಂಶ

ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಉದ್ಯೋಗ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಮೂಡಲಗಿ ತಾಲೂಕು ವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿ ಸಂಚರಿಸಲಿದೆ ಎಂದು ತಾಪಂ ಇಒ ಎಫ್.ಜಿ. ಚಿನ್ನನವರ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಉದ್ಯೋಗ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಮೂಡಲಗಿ ತಾಲೂಕು ವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿ ಸಂಚರಿಸಲಿದೆ ಎಂದು ತಾಪಂ ಇಒ ಎಫ್.ಜಿ. ಚಿನ್ನನವರ ಹೇಳಿದರು

ಪಟ್ಟಣದ ತಾಪಂ ಕಾರ್ಯಾಲಯಆವರಣದಲ್ಲಿ ಸೋಮವಾರ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಉದ್ಯೋಗ ವಾಹಿನಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು. ತಾಪಂ ಸಹಾಯಕ ನಿರ್ದೇಶಕರು (ಗ್ರಾಉ) ಸಂಗಮೇಶ ರೊಡ್ಡನ್ನವರ ಮಾತನಾಡಿ, ಮುಂದಿನ ವರ್ಷದ ಆಯವ್ಯಯ ತಯಾರಿಸುವ ಅರ್ಹ ಫಲಾನುಭವಿಗಳ ಹಾಗೂ ಸಾರ್ವಜನಿಕ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಲಾಗುವುದು. ಹಾಗಾಗಿ ಗ್ರಾಮೀಣ ಭಾಗದ ಜನರಿಗೆ ಮನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಲು ಉದ್ಯೋಗ ವಾಹಿನಿ ಮೂಲಕ ಪ್ರಚಾರ ನಡೆಸಲಾಗುತ್ತಿದೆ. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಪಿಡಿಒಗಳಾದ ಅಂಜನಾ ಗಚ್ಚಿ, ಶ್ರೀಶೈಲ ತಡಸನ್ನವರ, ಅನುರಾಧಾ ಭಜಂತ್ರಿ, ಆರತಿ ಪತ್ತಾರ, ತಾಂತ್ರಿಕ ಸಂಯೋಜಕ ನಾರ್ಗಾಜುನ ಇಳಗೇರ, ಎಂಐಎಸ್ ಸಂಯೋಜಕ ನಿರಂಜನ ಮಲ್ಲವ್ವಗೋಳ, ತಾಪಂ ಸಿಬ್ಬಂದಿ ಮಲ್ಲಿಕಾರ್ಜುನ ತೆರದಾಳ, ಗಂಗಾಧರ ಹಾಗೂ ಬಿಎಫ್ ಟಿಗಳಾದ ಅಶೋಕ ದೊಡ್ಡಮನಿ, ಬಸವರಾಜ ಇಟ್ನಾಳ, ಜುಬೇರ ಎನ್., ರವಿ.ಡಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ