ಕನ್ನಡಪ್ರಭ ವಾರ್ತೆ ಸಿಂಧನೂರು
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 8 ವರ್ಷಗಳಿಂದ ಪ್ರತಿವರ್ಷವೂ ಸಿಂಧನೂರಿನಲ್ಲಿ ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿ ಹಮ್ಮಿಕೊಳ್ಳುತ್ತಾ ಬರಲಾಗಿದೆ. ಈ ಬಾರಿ ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡು ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.
35 ಪ್ಲಸ್, 45 ಪ್ಲಸ್, 55 ಪ್ಲಸ್ ಹಾಗೂ 65 ಪ್ಲಸ್ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆಗಳು ನಗರದ ಎಫ್ಆರ್ಸಿಎಸ್ ಕ್ಲಬ್ನಲ್ಲಿ ಹಾಗೂ ಓಪನ್ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆಗಳು ಸ್ಥಳೀಯ ಯೂಥ್ ಅಸೋಸಿಯೇಶನ್ ಕ್ಲಬ್ನಲ್ಲಿ ನಡೆಯಲಿದ್ದು, ಪ್ರತಿಯೊಬ್ಬರಿಗೂ ಮುಕ್ತ ಅವಕಾಶವಿದೆ ಎಂದರು.ಎಫ್ಆರ್ಸಿಎಸ್ ಸದಸ್ಯ ಡಾ.ಎಸ್.ಶಿವರಾಜ ಮಾತನಾಡಿ, ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಸೇರಿ ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡು ಉತ್ತರ ಕರ್ನಾಟಕ ಅಸೋಸಿಯೇಶನ್ ರಚಿಸಲಾಗಿದೆ. ರಾಯಚೂರಿನಲ್ಲಿ ನೋಂದಣಿ ಮಾಡಲಾಗಿದೆ. ಸಂಸ್ಥಾಪಕ ಅಧ್ಯಕ್ಷ ಅಧ್ಯಕ್ಷರಾಗಿ ಸಿ.ಟಿ.ಪಾಟೀಲ್ ಆಯ್ಕೆಯಾಗಿದ್ದು, ಜಿಲ್ಲೆಗೆ ಒಬ್ಬರಂತೆ 15 ಪ್ರತಿನಿಧಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಎಫ್ಆರ್ಸಿಎಸ್ ಕ್ಲಬ್ನ ಖಜಾಂಚಿ ಮುರಳೀಧರ ರೆಡ್ಡಿ, ಸದಸ್ಯರಾದ ವಿಶ್ವನಾಥ ಮಾಲಿ ಪಾಟೀಲ್, ಆರ್.ಸಿ.ಪಾಟೀಲ್, ರವಿರಾಜ ಇದ್ದರು.