ಕೋರ್ಟ್‌ನಲ್ಲಿ ವಾದ ಮಾಡುವಾಗಲೇ ಹೃದಯಾಘಾತದಿಂದ ವಕೀಲ ಸಾವು

KannadaprabhaNewsNetwork |  
Published : Apr 11, 2026, 02:00 AM IST
 ನಿಂಗಪ್ಪ ಸುದ್ದಿ | Kannada Prabha

ಸಾರಾಂಶ

ಶುಕ್ರವಾರ ಬೆಳಗ್ಗೆ ಪಟ್ಟಣದ ನ್ಯಾಯಾಲಯದಲ್ಲಿ ಭೂ ವಿವಾದದ ಪ್ರಕರಣವೊಂದರಲ್ಲಿ ನ್ಯಾಯಾಧೀಶರ ಎದುರು ತಮ್ಮ ವಾದ ಮಂಡಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದರು

ಕುಷ್ಟಗಿ: ಇಲ್ಲಿಯ ಸೀನಿಯರ್‌ ಸಿವಿಲ್‌ ನ್ಯಾಯಾಲಯದ ಕಲಾಪದಲ್ಲಿ ಪಾಲ್ಗೊಂಡು ಪ್ರಕರಣವೊಂದರಲ್ಲಿ ತಮ್ಮ ಕಕ್ಷಿದಾರರ ಪರವಾಗಿ ವಾದ ಮಾಡುತ್ತಿರುವಾಗಲೇ ವಕೀಲರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತರಾದ ದಾರುಣ ಘಟನೆ ಶುಕ್ರವಾರ ಕುಷ್ಟಗಿ ನ್ಯಾಯಾಲಯದಲ್ಲಿ ನಡೆದಿದೆ.

ಕುಷ್ಟಗಿ ತಾಲೂಕಿನ ತಾವರಗೇರಾದ ಬಸವಣ್ಣ ಕ್ಯಾಂಪಿನ ನಿಂಗಪ್ಪ ಸುದ್ದಿ (50) ಎಂಬವರೇ ಮೃತರಾದ ದುರ್ದೈವಿ.

ಶುಕ್ರವಾರ ಬೆಳಗ್ಗೆ ಪಟ್ಟಣದ ನ್ಯಾಯಾಲಯದಲ್ಲಿ ಭೂ ವಿವಾದದ ಪ್ರಕರಣವೊಂದರಲ್ಲಿ ನ್ಯಾಯಾಧೀಶರ ಎದುರು ತಮ್ಮ ವಾದ ಮಂಡಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದರು. ತಕ್ಷಣ ಅವರನ್ನು ವಕೀಲರು ಪಟ್ಟಣದ ಆಸ್ಪತ್ರೆಗೆ ಸೇರಿಸಿದರಾದರೂ ಹೃದಯಾಘಾತದಿಂದ ನಿಂಗಪ್ಪ ಸುದ್ದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಮೃತ ವಕೀಲ ನಿಂಗಪ್ಪ ಸುದ್ದಿಗೆ ತಾಯಿ, ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ.

ನಿಂಗಪ್ಪ ಕಳೆದ 20 ವರ್ಷಗಳಿಂದ ಗಂಗಾವತಿ, ಕುಷ್ಟಗಿ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದರು. ಜತೆಗೆ ರಂಗಭೂಮಿ ಬಗ್ಗೆ ಅಪಾರ ಪ್ರೇಮವಿದ್ದ ಅವರು ವಿವಿಧ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ.

ಮೃತ ವಕೀಲರು ಗಂಗಾವತಿ, ಕುಷ್ಟಗಿ ಸೇರಿದಂತೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ತಮ್ಮ ಕಕ್ಷಿದಾರರ ಪರ ಪ್ರಕರಣ ನಡೆಸುತ್ತಿದ್ದರು. ಶುಕ್ರವಾರ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಕುಷ್ಟಗಿ ನ್ಯಾಯಾಲಯದಲ್ಲಿ ಕೇಸ್ ಕುರಿತು ವಾದ ಮಂಡಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ನಿಂಗಪ್ಪ ಸುದ್ದಿ ನಿಧನಕ್ಕೆ ಗಂಗಾವತಿ, ಕುಷ್ಟಗಿ ಸೇರಿದಂತೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳ ವಕೀಲರ ಸಂಘದವರು ಕಂಬನಿ ಮಿಡಿದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಟ್ನಾಳ-ಹುಲಿಗಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಉಜ್ವಲ ಭವಿಷ್ಯಕ್ಕೆ ಶಿಕ್ಷಣವೇ ಪ್ರೇರಣೆ