)
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಕರಣ ಸಂಬಂಧ ತಮ್ಮ ವಿರುದ್ಧ ಆರೋಪಗಳನ್ನು ಕೈಬಿಡಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಲೋಕೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇತ್ಯರ್ಥ ಮಾಡಿದ್ದು, ಸಕ್ಷಮ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಸೂಚಿಸಿದೆ.
ವಕೀಲ ಲೋಕೇಶ್ ಮತ್ತು ಇತರೆ ಆರೋಪಿಗಳ ನಡುವಿನ ಹಣ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಪೀಠ, ಪ್ರಕರಣದ ಒಂದರಿಂದ ಐದನೇ ಆರೋಪಿಗಳು ಸುಪಾರಿ ಕೊಲೆಗಾರರಾಗಿರುವಾಗ, ವಕೀಲರ (ಅರ್ಜಿದಾರ) ಖಾತೆಯಿಂದ ಅವರ ಖಾತೆಗೆ ಹಣ ಹೇಗೆ ಹೋಗುತ್ತದೆ ಎಂದು ಪ್ರಶ್ನಿಸಿತು.ಲೋಕೇಶ್ ಪರ ವಕೀಲರು, ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಪಡೆಯುವವರೆಗೆ ಅರ್ಜಿದಾರರಿಗೆ ರಕ್ಷಣೆ ಮುಂದುವರಿಸಬೇಕು ಎಂಬ ಕೋರಿಕೆಗೆ ಪೀಠ ಸ್ಪಷ್ಟವಾಗಿ ನಿರಾಕರಿಸಿ, ಕೊಲೆ ಪ್ರಕರಣದಲ್ಲಿ ನಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ಯಾವುದೇ ಆದೇಶ ಮಾಡುವುದಿಲ್ಲ. ಇಲ್ಲವಾದಲ್ಲಿ ಆದೇಶ ಮಾಡುತ್ತಿದ್ದೆ ಎಂದು ನುಡಿಯಿತು.
ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಒಂದರಿಂದ ಐದನೇ ಆರೋಪಿಗಳು ಸುಪಾರಿ ಕೊಲೆಗಾರರಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಪ್ರಸಾದ್ ರಾವ್ ಪ್ರತೀಕಾರ ತೋರಿಸಲು ಜಿಮ್ ಟ್ರೇನರ್ ಕೊಲೆ ಮಾಡಲಾಗಿದೆ. ಜಿಮ್ ಟ್ರೇನರ್ ಮತ್ತು ಪ್ರಸಾದ್ ರಾವ್ ನಡುವೆ ಸಂಬಂಧ ಇತ್ತು ಎಂದು ನ್ಯಾಯಪೀಠಕ್ಕೆ ವಿವರಿಸಿದರು.