ಸವದತ್ತಿಯಲ್ಲಿ ವಕೀಲರ ದಿನಾಚರಣೆ

KannadaprabhaNewsNetwork |  
Published : Dec 09, 2024, 12:47 AM IST
ಕಕಕಕ | Kannada Prabha

ಸಾರಾಂಶ

ಸವದತ್ತಿ ಪಟ್ಟಣದ ವಕೀಲರ ಸಂಘದ ನೂತನ ಸಭಾಭವನದಲ್ಲಿ ವಕೀಲರ ದಿನ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸವದತ್ತಿ ಪಟ್ಟಣದ ವಕೀಲರ ಸಂಘದ ನೂತನ ಸಭಾಭವನದಲ್ಲಿ ವಕೀಲರ ದಿನ ಆಚರಿಸಲಾಯಿತು.

ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಶಶಿಧರ ಎಂ. ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸವದತ್ತಿ ವಕೀಲರ ಸಂಘದ ಅಧ್ಯಕ್ಷ ಎಂ.ಎನ್. ಮುತ್ತಿನ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಸಿದ್ರಾಮ ರೆಡ್ಡಿ ಆಗಮಿಸಿದ್ದರು.

ಸಹಾಯಕ ಸರ್ಕಾರಿ ಅಭಿಯೋಜಕಿ ಎ.ಎ.ನೇಸರಿಕರ, ಎಸ್‌.ಎಸ್. ಅಂಗಡಿ ಹಾಗೂ ಎಂ.ವೈ. ದೇವಲಾಪೂರ, ಸವದತ್ತಿ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಹಿರಿಯ ವಕೀಲರಾದ ಬಿ.ಎಂ. ಯಲಿಗಾರ, ಎಸ್.ಬಿ. ಗೋಪಶೆಟ್ಟಿ, ಸಿ.ಬಿ. ವಕ್ಕುಂದ, ಸಿ.ಎಸ್. ಹುಜರತ್ತಿ, ಬಿ.ಎನ್. ಬೆಡಸೂರ ಇತರರನ್ನು ಸನ್ಮಾನಿಸಲಾಯಿತು. ವಕೀಲರ ಸಂಘದ ನೂತನ ಸದಸ್ಯರಿಗೆ ಪುಷ್ಪ ನೀಡಿ ಸ್ವಾಗತಿಸಲಾಯಿತು.ಸವದತ್ತಿ ತಾಲೂಕು ಆರೋಗ್ಯ ಅಧಿಕಾರಿ ಎಸ್.ಎಸ್. ಸಬನೀಸ್ ಉಪನ್ಯಾಸ ನೀಡಿದರು. ಎಸ್.ಆರ್. ಆಲದಕಟ್ಟಿ ನಿರೂಪಿಸಿದರು. ವಕೀಲರಿಗೆ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ