ಕನ್ನಡಪ್ರಭ ವಾರ್ತೆ ಮದ್ದೂರು
ವಕೀಲರ ಸಂಘದ ಕಾರ್ಯದರ್ಶಿ ಎಂ.ಜೆ.ಸುಮಂತ್ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು, ಆರ್ಎಸ್ಎಸ್ ಪಥಸಂಚಲನದ ಕುರಿತು ತೀರ್ಪು ಕೊಡುವ ವಿಚಾರದಲ್ಲಿ ನ್ಯಾಯಾಧೀಶರು ಒಂದು ಪಕ್ಷದ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.
ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜ್ಞಾನಪ್ರಕಾಶ್ ಸ್ವಾಮೀಜಿಯನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ನ್ಯಾಯಾಲಯದ ಕಲಾಪದಿಂದ ಹೊರಗುಳಿಯಲು ವಕೀಲರು ನಿರ್ಣಯ ಕೈಗೊಂಡರು.ನಂತರ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಂಘದ ಆವರಣದಲ್ಲಿ ಕೆಲಕಾಲ ಮೌನ ಪ್ರತಿಭಟನೆ ನಡೆಸಿ ಉರಿಲಿಂಗಿಪೆದ್ದಿ ಮಠ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಿರಿಯ ವಕೀಲ ಟಿ.ನಾಗರಾಜು, ಎಚ್. ಮಾದೇಗೌಡ, ಎಂ.ಸಿ.ಚಂದ್ರಶೇಖರ್, ಎಂ.ಎಂ.ಪ್ರಶಾಂತ್, ಉಮೇಶ್, ಯೋಗಾನಂದ, ಕೆ.ಶಿವಣ್ಣ, ಚೆಲುವರಾಜು, ಮಹೇಶ, ಜಗದೀಶ್, ಪ್ರಿಯಾಂಕ, ವಿಲಾಸಿನಿ ಮತ್ತಿತರರು ಭಾಗವಹಿಸಿದ್ದರು.
ಹಲಗೂರು:
ಶುಕ್ರವಾರ ಫಲಿತಾಂಶ ಹೊರ ಬಂದಿದ್ದು, ರಿಟರ್ನಿಂಗ್ ಆಫೀಸರ್ ತ್ಯಾಗರಾಜ್ ಪ್ರಸಾದ್ ರವರು ಕೆ.ಮಂಚೇಗೌಡ, ಪ್ರಕಾಶ್, ನಿಂಗೇಗೌಡ, ಕೆ.ಸಿ.ಗೌಡ, ಸಣ್ಣಪ್ಪ, ರುಕ್ಮಂಗದಾಚಾರಿ, ಗೋವಿಂದರಾಜು, ರಾಜೇಗೌಡ, ಎನ್.ತಾಯಮ್ಮ, ಕೆಂಪಮ್ಮ, ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಚುನಾವಣೆಗೆ ಸಹಕರಿಸಿದ ನಮ್ಮ ಎಲ್ಲ ಮತದಾರರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಮ್ಮ ಹಾಲು ಉತ್ಪಾದಕರ, ಗ್ರಾಹಕರು ಹಾಗೂ ಒಕ್ಕೂಟದ ಏಳಿಗೆಗಾಗಿ ಎಲ್ಲರ ಸಲಹೆ ಸಹಕಾರ ಪಡೆದು ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.