ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

KannadaprabhaNewsNetwork |  
Published : Mar 14, 2024, 02:00 AM IST
ಫೋಟೋ: 13 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇನ್ಸ್ಪೆಕ್ಟರ್ ಚನ್ನೇಶ್ ಅಮಾನತಿಗೆ ಆಗ್ರಹಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನ ಗುಂಡೂರು ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ವಿಚಾರವಾಗಿ ವಕೀಲ ಸಂಪತ್ ಮೇಲೆ ಅನುಗೊಂಡನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಶ್ ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ಹೊಸಕೋಟೆ ಡಿವೈಎಸ್ಪಿ ಕಚೇರಿ ಮುಂದೆ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲಾಯಿತು.

ಹೊಸಕೋಟೆ: ತಾಲೂಕಿನ ಗುಂಡೂರು ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ವಿಚಾರವಾಗಿ ವಕೀಲ ಸಂಪತ್ ಮೇಲೆ ಅನುಗೊಂಡನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಶ್ ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ಹೊಸಕೋಟೆ ಡಿವೈಎಸ್ಪಿ ಕಚೇರಿ ಮುಂದೆ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲಾಯಿತು.

ಅನುಗೊಂಡನಹಳ್ಳಿ ಹೋಬಳಿಯ ಗುಂಡೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಯಡಿ 2016-1ರಲ್ಲಿ ಸರ್ವೇ ನಂ.40ರಲ್ಲಿ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು. ಗ್ರಾಪಂ ಅಧಿಕಾರಿಗಳು ಕುಡಿಯುವ ನೀರಿನ ಪೈಪ್‌ಲೈನ್ ಜೋಡಣೆಗಾಗಿ ಹೋದಾಗ ಗ್ರಾಮಸ್ಥ ಶೀನಪ್ಪ ಅಡ್ಡಿಪಡಿಸಿದ್ದರು. ಈ ಸಂದರ್ಭದಲ್ಲಿ ವಕೀಲ ಸಂಪತ್ ಆಕ್ಷೇಪಣೆ ವ್ಯಕ್ತಪಡಿಸಿದ್ದು ಟ್ಯಾಂಕ್ ನಿರ್ಮಾಣದ ಸ್ಥಳದ ಪ್ರಕರಣ ನ್ಯಾಯಾಲಯದಲ್ಲಿದ್ದು ಕಾಮಗಾರಿ ನಡೆಸಬಾರದು ಎಂದಿದ್ದರು. ಆಗ ಇನ್ಸ್‌ಪೆಕ್ಟರ್ ಚನ್ನೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ.

ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ ಮಾತನಾಡಿ, ರಾಮನಗರದಲ್ಲಿ ವಕೀಲನ ಮೇಲೆ ದೌರ್ಜನ್ಯ ಪ್ರಕರಣ ಮಾಸುವ ಮುನ್ನವೇ ಹೊಸಕೋಟೆಯಲ್ಲಿ ಈ ರೀತಿ ವಕೀಲನ ಮೇಲೆ ಇನ್ಸ್‌ಪೆಕ್ಟರ್ ಚನ್ನೇಶ್ ದೌರ್ಜನ್ಯ ಮಾಡಿರುವುದು ಖಂಡನೀಯ. ಘಟನಾ ಸ್ಥಳದ ವಿಡಿಯೋ ಸಾಕ್ಷಿ ಇದ್ದು, ವಕೀಲ ಸಂಪತ್‌ರನ್ನು ತಳ್ಳಾಟ-ನೂಕಾಟ ಮಾಡಿದ್ದು ಕೂಡಲೇ ಇನ್ಸ್‌ಪೆಕ್ಟರ್‌ ಅವರನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದರು.

ಅಖಿಲ ಭಾರತ ವಕೀಲರ ಸಂಘದ ರಾಜ್ಯಾಧ್ಯಕ್ಷ ಹರೀಂದ್ರ ಮಾತನಾಡಿ, ನ್ಯಾಯ ಕೊಡಿಸುವ ವಕೀಲರಿಗೆ ಸಾರ್ವಜನಿಕರ ಎದುರಲ್ಲೇ ದೌರ್ಜನ್ಯ ಮಾಡಿದರೆ, ಸಾರ್ವಜನಿಕರಿಗೆ ವಕೀಲರಾದ ನಾವು ಯಾವ ರೀತಿ ನ್ಯಾಯ ಕೊಡಿಸಲು ಸಾಧ್ಯ. ಆದ್ದರಿಂದ ಅವರನ್ನು ಕೂಡಲೆ ಅಮಾನತು ಮಾಡಿ ಪ್ರಕರಣದ ವಿಚಾರಣೆ ಮಾಡಬೇಕು ಎಂದರು.

ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ್, ಕಾರ್ಯದರ್ಶಿ ನವೀನ್, ಮಾಜಿ ಅಧ್ಯಕ್ಷರಾದ ರಮೇಶ್, ಸುಬ್ರಹ್ಮಣಿ, ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಫೋಟೋ: 13 ಹೆಚ್‌ಎಸ್‌ಕೆ 1

ವಕೀಲನ ಮೇಲೆ ದೌರ್ಜನ್ಯವೆಸಗಿರುವ ಇನ್ಸ್‌ಪೆಕ್ಟರ್ ಚನ್ನೇಶ್ ಅಮಾನತಿಗೆ ಆಗ್ರಹಿಸಿ ಹೊಸಕೋಟೆ ಡಿವೈಎಸ್ಪಿ ಕಚೇರಿ ಮುಂದೆ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!