ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಠಾಣಾಧಿಕಾರಿ ಅಮಾನತಿಗೆ ಆಗ್ರಹಹಿರಿಯ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಐಜೂರು ಪೋಲೀಸ್ ಠಾಣಾಧಿಕಾರಿ ಸೈಯದ್ ತನ್ವಿರ್ ಹುಸ್ಸೇನ್ ಸುಖಾ ಸುಮ್ಮನೆ ವಕೀಲರ ಸಂಘದ ಸುಮಾರು 40 ಜನ ವಕೀಲರ ಮೇಲೆ ಸುಳ್ಳು ಎಫ್.ಐ.ಆರ್ ದಾಖಲು ಮಾಡಿರುವುದರ ಬಗ್ಗೆ ತನಿಖೆ ನಡೆಸ ಬೇಕು, ಪೋಲೀಸ್ ಠಾಣಾಧಿಕಾರಿ ಸೈಯದ್ ತನ್ವಿರ್ ಹುಸ್ಸೇನ್ ರವರನ್ನು ಈ ಕೂಡಲೇ ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಗೌರವಾಧ್ಯಕ್ಷ ಗೋವಿಂದರೆಡ್ಡಿ, ಕಾರ್ಯದರ್ಶಿ ಮುರಳಿ ಮೋಹನ್, ಖಜಾಂಚಿ ಹರಿಕೃಷ್ಣ, ಹಿರಿಯ ವಕೀಲರಾದ ಎಸ್.ವಿ.ರಾಮಮೂರ್ತಿ, ಪಿ ಸುಬ್ರಮಣಿ, ತ್ರಯಂಭಕರಾವ್, ವಕೀಲರಾದ ಮಂಜುನಾಥ್ ರೆಡ್ಡಿ, ಮತ್ತಿತರರು ಇದ್ದರು.ಗುಡಿಬಂಡೆಯಲ್ಲೂ ವಕೀಲರ ಪ್ರತಿಭಟನೆ
ಗುಡಿಬಂಡೆ: ರಾಮನಗರದ 40 ಮಂದಿ ವಕೀಲರ ಮೇಲೆ ಸುಳ್ಳು ಎಫ್ಐಆರ್ ದಾಖಲು ಮಾಡಿರುವ ಪಿಎಸ್ಐ ರವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ತಾಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರಾಮನಾಥರೆಡ್ಡಿ ಮಾತನಾಡಿ, ರಾಮನಗರ ಪ್ರಕರಣ ಕುರಿತಂತೆ ರಾಜ್ಯಾದ್ಯಂತ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಸುಳ್ಳು ಮೊಕದ್ದಮೆ ದಾಖಲು ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.