- ಪ್ರಭಾರ ನ್ಯಾಯಾಧೀಶೆ ಬಿ.ಎಸ್. ಭಾನುಮತಿ ಸಲಹೆ । ಟಿಎಂಎಸ್ ಕಾಲೇಜಿನ ರೋಟರಿ ಸಭಾಂಗಣದಲ್ಲಿ ವಕೀಲರ ದಿನಾಚರಣೆ - - - ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದ ಟಿಎಂಎಸ್ ಕಾಲೇಜಿನ ರೋಟರಿ ಸಭಾಂಗಣದಲ್ಲಿ ವಕೀಲರ ಸಂಘದಿಂದ ಏರ್ಪಡಿಸಿದ್ಧ ವಕೀಲರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯವಾದಿಗಳು ಸಮಾಜದ ಮುಖ್ಯಭೂಮಿಕೆಯಲ್ಲಿ ಕರ್ತವ್ಯ ನಿರ್ವಹಿಸುವ ಜೊತೆಗೆ ರಾಜಕಾರಣ ಕ್ಷೇತ್ರದಲ್ಲೂ ತೊಡಗಿಸಿಕೊಂಡು ಸಮಾಜ ಸುಧಾರಣೆಗೆ ಮುಂದಾಗುತ್ತಿರುವುದು ಖುಷಿಯ ಸಂಗತಿ. ಹೀಗಾಗಿ ಪ್ರಾರಂಭದಲ್ಲಿ ಯುವ ವಕೀಲರಿಗೆ ಮಾರ್ಗದರ್ಶನದ ಅಗತ್ಯವಿದೆ. ಕಾನೂನಿನ ತಿಳಿವಳಿಕೆ ಬಗ್ಗೆ ಸಂದೇಹವಿದ್ದಲ್ಲಿ ಹಿರಿಯರಲ್ಲಿ ಚರ್ಚಿಸಿ ಸಲಹೆ ಪಡೆದುಕೊಳ್ಳಬೇಕು ಎಂದರು.
ವಕೀಲ ವೃತ್ತಿಯಲ್ಲಿ ಎಷ್ಟೇ ತಿಳಿದುಕೊಂಡರೂ ಅಹಂ ಎನ್ನುವುದು ಇರಕೂಡದು. ತಿಳಿವಳಿಕೆ ಹೊಂದಿದ್ದರೂ ಇನ್ನಷ್ಟು ತಿಳಿಯುವ ಹಂಬಲವಿರಬೇಕು. ಯುವ ವಕೀಲರು ಕಲಿಕೆಗೆ ಹೆಚ್ಚಿನ ಮಹತ್ವ ಕೊಡುವುದನ್ನು ರೂಢಿಸಿಕೊಂಡರೆ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಲು ಸಾಧ್ಯ ಎಂದು ತಿಳಿಸಿದರು.ವಿಧಾನ ಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳಂತ ಕ್ಲಿಷ್ಟಕರ ಸನ್ನಿವೇಶದಲ್ಲಿ ಸಿಲುಕಿರುವ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಮತ್ತು ರಕ್ಷಣೆ ಒದಗಿಸುವುದು ವಕೀಲರ ಕರ್ತವ್ಯವಾಗಬೇಕು. ಆಗ ಮಾತ್ರ ನಾಗರೀಕ ಸಮಾಜದಲ್ಲಿ ವಕೀಲರಿಗೆ ಹೆಚ್ಚು ಸ್ಥಾನಮಾನ ದೊರಕಲು ಸಾಧ್ಯ ಎಂದರು.
ಪ್ರಸ್ತುತ ರಾಜಕೀಯ ಮುಖಂಡರು ಅಥವಾ ಅಧಿಕಾರಿಗಳು ತಪ್ಪೆಸಗಿದರೆ ಪ್ರಶ್ನಿಸುವ ಗುಣಗಳನ್ನು ವಕೀಲರು ಬೆಳೆಸಿಕೊಳ್ಳಬೇಕು. ಅನ್ಯಾಯವನ್ನು ದೃಢವಾಗಿ ಮೆಟ್ಟಿ ನಿಲ್ಲುವಂತಹ ಸಾಮರ್ಥ್ಯ ಅಳವಡಿಸಿಕೊಂಡರೆ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಬಹುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ವಕೀಲ ಎಸ್.ಎಸ್. ವೆಂಕಟೇಶ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತದನಂತರ ಕ್ರೀಡಾಕೂಟ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಕೀಲರ ವೃತ್ತಿಯಲ್ಲಿ ನಿರಂತರ ಸೇವೆ ಸಲ್ಲಿಸಿದ ಎಂ.ಕೆ. ರಮೇಶ್, ಜಿ.ಎಂ. ಜಯಕುಮಾರ್, ಅನಿಲ್ ಅವರನ್ನು ಸನ್ಮಾನಿಸಲಾಯಿತು.
- - -
- ಬಿ.ಎಸ್. ಭಾನುಮತಿ, ಪ್ರಭಾರ ನ್ಯಾಯಾಧೀಶೆ
ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ನಡೆದ ವಕೀಲರ ದಿನ ಕಾರ್ಯಕ್ರಮವನ್ನು ನ್ಯಾ. ಭಾನುಮತಿ ಉದ್ಘಾಟಿಸಿದರು. ವಿಪ ಸದಸ್ಯ ಎಸ್.ಎಲ್. ಭೋಜೇಗೌಡ, ಸುಜೇಂದ್ರ, ಶರತ್ಚಂದ್ರ, ಅನಿಲ್ಕುಮಾರ್ ಹಾಗೂ ವಕೀಲರು ಇದ್ದರು.