ಮಂಗಳೂರು: ನಗರದ ಕೊಡಿಯಾಲ್ಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ನೆಟ್ವರ್ಕ್ ಜಾಮರ್ ಅಳವಡಿಕೆಯಿಂದ ನ್ಯಾಯಾಲಯ ಸಹಿತ ಸುತ್ತಲಿನ ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅನೇಕ ಬಾರಿ ಸರ್ಕಾರದ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ, ಜೈಲ್ ಜಾಮರ್ ತೆರವಿಗೆ ಒತ್ತಾಯಿಸಿ ಸೆ.18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ವೇಳೆ ಪಡೀಲ್ನ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ ತಿಳಿಸಿದರು.ಅವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.18ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಕೋರ್ಟ್ ಆವರಣದಲ್ಲಿ ವಕೀಲರು ಒಟ್ಟು ಸೇರಿ ಅಲ್ಲಿಂದ ಪಡೀಲ್ನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ. 250 ಮಂದಿ ವಕೀಲರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ನಡೆಸಿದರೆ ನಮ್ಮ ಮೇಲೆ ಪ್ರಕರಣ ದಾಖಲಿಸುತ್ತಾರೆ ಎಂಬ ಅರಿವು ನಮಗಿದೆ. ಪರಿಣಾಮ ಗೊತ್ತಿದ್ದೆ ನಾವು ಪ್ರತಿಭಟನೆಗೆ ನಿರ್ಧರಿಸಿದ್ದೇವೆ. ಗೋಲಿಬಾರ್ ಬೇಕಾದರೆ ಮಾಡಲಿ. ನಮ್ಮ ನಿರ್ಧಾರದಿಂದ ನಾವು ಹಿಂದೆ ಸರಿಯುವುದಿಲ್ಲ. ಸಚಿವ ಸಂಪುಟ ಸಭೆಗೆ ಭದ್ರತೆ ನೀಡುವುದು ಸರ್ಕಾರದ ಮೊದಲ ಆದ್ಯತೆಯಾದರೆ, ಜೈಲ್ ಜಾಮರ್ ತೆಗೆಸುವುದೇ ನಮ್ಮ ಮೊದಲ ಆದ್ಯತೆ ಎಂದರು.
ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗೌತಮ್, ಉಪಾಧ್ಯಕ್ಷ ಪ್ರವೀಣ್ ಅದ್ಯಪಾಡಿ, ಕೋಶಾಧಿಕಾರಿ ರೇಖಾ, ಮಹೇಶ್ ಜೋಗಿ, ರಾಘವೇಂದ್ರ ರಾವ್, ಸುಜಿತ್ಕುಮಾರ್, ಸುಂದರ ಗೌಡ, ಅಕ್ಷತಾ, ಅನಿತಾ, ತೀರ್ಥೇಶ್, ಜಯಪ್ರಕಾಶ್ ಇದ್ದರು.