ಬೇಡಿಕೆಗಳ ಈಡೇರಿಕೆಗೆ ವಕೀಲರ ಒಕ್ಕೂಟ ಆಗ್ರಹ

KannadaprabhaNewsNetwork |  
Published : Jun 16, 2025, 05:46 AM IST
ಸುದ್ದಿ ಚಿತ್ರ ೧ ಚಿಕ್ಕಬಳ್ಳಾಪುರದಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು | Kannada Prabha

ಸಾರಾಂಶ

ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿ.ಮಾ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಆವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ವಕೀಲರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರದಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಗಮನ ಸೆಳೆದರು.

ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೆ ಇದ್ದಲ್ಲಿ ವಕೀಲರುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ನಮ್ಮ ನಡೆಯನ್ನು ವಿಧಾನಸೌಧ, ವಕೀಲರ ಪರಿಷತ್ ಕಡೆಗೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾನಿರತ ವಕೀಲರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ವಕೀಲರಿಗೆ ರಕ್ಷಣೆ ನೀಡಲು ಆಗ್ರಹ

ಒಕ್ಕೂಟದ ರಾಜ್ಯ ಸಮಿತಿ ಸದಸ್ಯ ಎನ್.ಎಚ್.ರಮೇಶ್ ಮಾತನಾಡಿ, ಸರ್ಕಾರ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು. ಅಲ್ಲದೇ ಆವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು. ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ 10,000 ರೂ, (ಸಹಾಯಧನ) ನೀಡಬೇಕು. ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರೂ, ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ರೂ. 10 ಲಕ್ಷ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು..ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿ.ಮಾ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿದ ಅವರು, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.

ವಕೀಲರಿಗೆ ಟೋಲ್ ಶುಲ್ಕ ಮುಕ್ತ

ರಾಜ್ಯದಲ್ಲಿನ ಎಲ್ಲ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಚೇಂಬರ್‌ ಗಳನ್ನು ಸ್ಥಾಪಿಸಬೇಕು. ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು. ರೆವೆನ್ಯೂ ಎಸಿ, ಡಿಸಿ ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವುದರಿಂದ ಕಂದಾಯ ಪ್ರಕರಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್, ಅಖಿಲ ಭಾರತ ವಕೀಲರ ಒಕ್ಕೂಟದ ಪದಾಧಿಕಾರಿಗಳಾದ ಎಚ್.ಸಿ.ಪಾಪಿರೆಡ್ಡಿ, ಎನ್,ರಘುರಾಮ್, ಗಂಗರಾಜು, ಮಂಜುನಾಥರೆಡ್ಡಿ, ಗಾಂಧಿ, ಅಮರನಾರಾಯಣಸ್ವಾಮಿ, ಅಣ್ಣಯ್ಯಪ್ಪ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ