ಬಾವುಟಗುಡ್ಡೆಯಲ್ಲಿ ದ್ವಜಸ್ತಂಭ ನಿರ್ಮಾಣಕ್ಕೆ ಶಂಕು

KannadaprabhaNewsNetwork |  
Published : Sep 19, 2024, 01:58 AM IST
ಧ್ವಜಸ್ತಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. | Kannada Prabha

ಸಾರಾಂಶ

ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು ನಿರ್ಮಿಸುವಂತೆ ಮನವಿ ಮಾಡಿದ್ದರು. ಅದರಂತೆ ಭಾನುವಾರ ಬಾವುಟಗುಡ್ಡೆಯಲ್ಲಿ ಶಂಕುಸ್ಥಾಪನೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲೇ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಆ ಪ್ರದೇಶದಲ್ಲಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರಿಗೆ ಈ ಕುರಿತು ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು ನಿರ್ಮಿಸುವಂತೆ ಮನವಿ ಮಾಡಿದ್ದರು. ಅದರಂತೆ ಭಾನುವಾರ ಬಾವುಟಗುಡ್ಡೆಯಲ್ಲಿ ಶಂಕುಸ್ಥಾಪನೆ ನೆರವೇರಿತು.

ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಶಾಸಕರಾದ ವೇದವಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ , ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ‌ ಪ್ರವೀಣ್ ಚಂದ್ರ ಆಳ್ವ, ಮಾಜಿ ಶಾಸಕ ಹರೀಶ್ ಕುಮಾರ್,ಪಾಲಿಕೆ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ