- ಮಹಾಲಕ್ಷ್ಮೀ ಲೇಔಟಿನಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಕನ್ನಡಪ್ರಭ ವಾರ್ತೆ, ಕಡೂರು
ಕಳೆದ 50 ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೇವಲ 20 ಕಂದಾಯ ಗ್ರಾಮ, ಉಪ ಗ್ರಾಮಗಳ ರಚನೆಯಾಗಿದೆ. ತಮ್ಮ ಎರಡೂವರೆ ವರ್ಷದ ಅವಧಿಯಲ್ಲಿ 131 ಕಂದಾಯ ಗ್ರಾಮ, ಉಪ ಗ್ರಾಮಗಳ ರಚನೆಯಾಗಿದೆ. ಇದರ ಶ್ರೇಯಸ್ಸು ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಸಲ್ಲಬೇಕು ಎಂದರು.ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ನಿವೇಶನ ಖರೀದಿ ಮಾಡುವವರು ಎಲ್ಲ ಮೂಲಸೌಕರ್ಯಗಳೂ ಬಡಾವಣೆಯಲ್ಲಿ ಇವೆಯೇ ಎನ್ನುವುದನ್ನು ಖಾತರಿಪಡಿಸಿಕೊಂಡು ಖರೀದಿಗೆ ಮುಂದಾಗಬೇಕು. ಜತೆಗೆ ಲೇ ಔ ಟಿನಲ್ಲಿ ನಿವಾಸಿಗಳ ಸಂಘ ಮಾಡಿಕೊಂಡು ಮೂಲಸೌಕರ್ಯಗಳ ರಕ್ಷಣೆ ಮತ್ತು ನಿರ್ವಹಣೆಗೆ ಒತ್ತು ಕೊಡಬೇಕು. ಶಾಸಕ ಆನಂದ್ ಪುರಸಭೆ ಸದಸ್ಯರಾಗಿಯೂ ಅನುಭವ ಇರುವುದರಿಂದ ಸಮಸ್ಯೆಗಳ ಅರಿವು ಮತ್ತು ಪರಿಹಾರಕ್ಕೆ ಮಾರ್ಗೋಪಾಯವೂ ತಿಳಿದಿದೆ. ಬಡಾವಣೆ ನಿರ್ಮಿಸಲು ಮುಂದಾಗುವ ಭೂ ಮಾಲೀಕರೂ ಕಾನೂನು ಪಾಲಿಸಿ, ನಾಗರಿಕ ಸೌಲಭ್ಯಗಳನ್ನು ಕಲ್ಪಿಸಿ ಯೇ ನಿವೇಶನ ಮಾರಾಟ ಮಾಡಬೇಕು ಎಂದು ಕಿವಿಮಾತಿನ ಮೂಲಕ ಸಲಹೆ ನೀಡಿದರು. ಪುರಸಭೆ ಹಿರಿಯ ಸದಸ್ಯ ತೋಟದಮನೆ ಮೋಹನ್ ಮಾತನಾಡಿ, ಉಪೇಂದ್ರ ಬಡಾವಣೆಯಲ್ಲಿದ್ದ ಗಾಡಿ ಜಾಡಿನ ಹಳೆ ರಸ್ತೆ ಬಿಡಿಸಿಕೊಡುವಂತೆ ಶಾಸಕ ಆನಂದ್ ರವರಿಗೆ ನಿವಾಸಿಗರ ಪರವಾಗಿ ಮನವಿ ಮಾಡಿದರು. ಇದರಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗುತ್ತಿರುವುದನ್ನು ತಪ್ಪಿಸಬೇಕು ಎಂದು ಕೋರಿ, ಬಡಾವಣೆ ನಿವಾಸಿಗರು ಸ್ಥಳೀಯ ಸಮಸ್ಯೆಗಳ ಕುರಿತು ಗಮನ ಸೆಳೆದರು. ಮಲ್ಲೇಶ್ವರ ಗ್ರಾಪಂ ಸದಸ್ಯ ವಸಂತ್ ಕುಮಾರ್, ದಾನಿ ಉಮೇಶ್, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ದೊಣ್ಣೆ ಕೋರನಹಳ್ಳಿ ಉಮೇಶ್, ನಿವೃತ್ತ ಶಿಕ್ಷಕ ಚಂದ್ರಪ್ಪ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಚ್.ಚಂದ್ರಪ್ಪ, ಎಪಿಎಂಸಿ ಮಾಜಿ ನಿರ್ದೇಶಕ ಯರದಕೆರೆ ಎಂ.ರಾಜಪ್ಪ, ತಾಲೂಕು ವೀರಶೈವ ಮಹಾ ಸಭೆ ಅಧ್ಯಕ್ಷ ಸಾಣೇಹಳ್ಳಿ ರೇಣುಕಾರಾಧ್ಯ, ನಾಗರತ್ನಮ್ಮ, , ಚನ್ನಪ್ಪ, ಮಂಜುನಾಥ್, ಸ್ಥಳೀಯ ನಿವಾಸಿ ಗಳಾದ ಬಸವರಾಜಪ್ಪ, ಓಂಕಾರಪ್ಪ, ಧರ್ಮರಾಜ್, ಕರಿಬಡ್ಡೆ ರಾಜು, ಪ್ರಕಾಶ್, ಗಿರೀಶ್, ಸಪ್ತಕೋಟಿ ಧನಂಜಯ, ಶಿವಕುಮಾರ್ ಮತ್ತಿತರರು ಇದ್ದರು.23ಕೆಕೆಡಿಯು1
ಕಡೂರು ಪಟ್ಟಣದ ಸಮೀಪದಲ್ಲಿರುವ ಮಹಾಲಕ್ಷ್ಮಿ ಲೇಔಟಿನ ಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಶಾಸಕ ಕೆ.ಎಸ್.ಆನಂದ್ ಭೂಮಿ ಪೂಜೆ ನೆರವೇರಿಸಿದರು. ಭಂಡಾರಿ ಶ್ರೀನಿವಾಸ್, ತೋಟದ ಮನೆ ಮೋಹನ್ , ದಾನಿ ಉಮೇಶ್, ದೊಣ್ಣೆಕೋರನಹಳ್ಳಿ ಉಮೇಶ್ ಮತ್ತಿತರರು ಇದ್ದರು.