ಹಸಿರು ಕ್ರಾಂತಿಯ ಮೂಲಕ ಆಹಾರದ ಕೊರತೆ ನೀಗಿಸಿದ ನಾಯಕ: ತಹಸೀಲ್ದಾರ್

KannadaprabhaNewsNetwork |  
Published : Apr 09, 2024, 12:45 AM IST
8ಕೆಆರ್ ಎಂಎನ್‌ 1.ಜೆಪಿಜಿಹಾರೋಹಳ್ಳಿ ತಾಲೂಕು ಆಡಳಿತದ ವತಿಯಿಂದ ಚಾಮುಂಡೇಶ್ವರಿ ದೇವಸ್ಥಾನದ ಬಳಿ ನಡೆದ ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್ ವಿಜಿಯಣ್ಣ  ಉದ್ಘಾಟಿಸಿದರು. | Kannada Prabha

ಸಾರಾಂಶ

ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಉಂಟಾಗಿದ್ದ ಆಹಾರ ಕೊರತೆಯನ್ನು ನೀಗಿಸಿದರು. ಅಲ್ಲದೇ ಇಡೀ ಮಾನವರ ಅಭ್ಯುದಯಕ್ಕಾಗಿ ಯೋಜನೆಗಳನ್ನು ರೂಪಿಸಿದ್ದರು.

ಕನ್ನಡಪ್ರಭ ವಾರ್ತೆ ಹಾರೋಹಳ್ಳಿ

ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಕೊರತೆಯನ್ನು ನೀಗಿಸಿದ ಮಹಾನ್ ನಾಯಕ ಎಂದು ತಹಸೀಲ್ದಾರ್ ವಿಜಿಯಣ್ಣ ಹೇಳಿದರು.

ತಾಲೂಕು ಆಡಳಿತದ ವತಿಯಿಂದ ಚಾಮುಂಡೇಶ್ವರಿ ದೇವಸ್ಥಾನದ ಬಳಿ ನಡೆದ ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅ‍ವರು, ಆ ಕಾಲದಲ್ಲೇ ಮುಂದಾಲೋಚನೆ ಇಟ್ಟುಕೊಂಡು ಬಾಬು ಜಗಜೀವನ ರಾಂ ಕಾರ್ಯ ನಿರ್ವಹಿಸಿದ್ದರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಉಂಟಾಗಿದ್ದ ಆಹಾರ ಕೊರತೆಯನ್ನು ನೀಗಿಸಿದರು. ಅಲ್ಲದೇ ಇಡೀ ಮಾನವರ ಅಭ್ಯುದಯಕ್ಕಾಗಿ ಯೋಜನೆಗಳನ್ನು ರೂಪಿಸಿದ್ದರು ಎಂದರು.

ಸಮತಾ ಸೈನಿಕ ದಳ ಯುವ ಘಟಕ ಅಧ್ಯಕ್ಷ ಜಿ.ಗೋವಿಂದಯ್ಯ ಮಾತನಾಡಿ, ಬಾಬು ಜಗಜೀವನ ರಾಂ ಈ ದೇಶದ ಶಕ್ತಿ, ಇವರು ದೇಶದ ಉದ್ದಗಲಕ್ಕೂ ಸ್ವತಂತ್ರ ಸೇನಾನಿಯಾಗಿ ಹೋರಾಡಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಅಸ್ಪೃಶ್ಯತೆ ವಿರುದ್ಧ ಹೋರಾಡಿ, ಮಹಾತ್ಮಾ ಗಾಂಧಿಯವರ ಜೊತೆಗೂಡಿ ಎಲ್ಲರ ಸರ್ವತೋಮುಖ ಬೆಳವಣಿಗೆಗೆ ದುಡಿದಿದ್ದರು ಎಂದರು.

ಬಾಬು ಜಗಜೀವನ ರಾಂ ರವರ 117ನೇ ಜಯಂತಿ ಪ್ರಯುಕ್ತ ಬೆಳ್ಳಿ ರಥದ ಮೂಲಕ ಅವರ ಭಾವಚಿತ್ರವನ್ನು ಹಾರೋಹಳ್ಳಿ ಸರ್ಕಲ್ ನಿಂದ ಆಂಜನೇಯ ದೇವಸ್ಥಾನದವರೆಗೆ ತಮಟೆ, ವಾದ್ಯಗಳ ಮುಖಾಂತರ ಮೆರವಣಿಗೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸೈನಿಕ ದಳದ ಜಿಲ್ಲಾಧ್ಯಕ್ಷ ಕೋಟೆ ಕುಮಾರ್, ಪಪಂ ಮುಖ್ಯಾಧಿಕಾರಿ ಶ್ವೇತಬಾಯಿ, ಚಂದ್ರು, ರಾಮಕೃಷ್ಣ, ಮೇಡಮಾರನಹಳ್ಳಿ ಶಿವರಾಜು, ಬೆನಚುಕಲ್ದೊಡ್ಡಿ ರುದ್ರೇಶ್, ಕೋಟೆ ಪ್ರಕಾಶ್, ಶಶಿಭಾರ್ಗವ್, ಸುರೇಶ್, ಲಕ್ಷ್ಮಣ್ ಕಲ್ಬಾಳ್, ಚಂದ್ರು, ನವೀನ್ಕುಮಾರ್, ಕಾಳಮ್ಮ, ಶೇಷಾದ್ರಿ ರಾಮು, ಶ್ರೀನಿವಾಸ್ ಸೇರಿ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ