ಸಿದ್ದರಾಮಯ್ಯನವರ ಮೇಲೆ ನಾಯಕರ ಎತ್ತಿ ಕಟ್ಟುವ ಕೆಲಸ

KannadaprabhaNewsNetwork |  
Published : Sep 21, 2025, 02:00 AM IST
ಚಿತ್ರದುರ್ಗದ ಕುರುಬರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಜಾತಿ ಗಣತಿಗೆ ಸಂಬಂಧಿಸಿದ ಜಾಗೃತಿಕರಪತ್ರ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯನವರ ಮೇಲೆ ನಾಯಕ ಸಮಾಜದವರನ್ನು ಎತ್ತಿ ಕಟ್ಟುವ ಕೆಲಸ ವ್ಯವಸ್ತಿತವಾಗಿ ನಡೆಸಲಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯನವರ ಮೇಲೆ ನಾಯಕ ಸಮಾಜದವರನ್ನು ಎತ್ತಿ ಕಟ್ಟುವ ಕೆಲಸ ವ್ಯವಸ್ತಿತವಾಗಿ ನಡೆಸಲಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು. ಇಲ್ಲಿನ ಕುರುಬರ ಹಾಸ್ಟೆಲ್‌ನಲ್ಲಿ ಕರೆಯಲಾಗಿದ್ದ ಸಮಾಜ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಟಿ ಮೀಸಲಾತಿಗೆ ಕುರುಬರ ಸೇರ್ಪಡೆ ಮಾಡಲಾಗುತ್ತಿದೆ ಎಂಬ ಅಂಶ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಗೂಬೆ ಕೂರಿಸುವ ಕೆಲಸವಾಗುತ್ತಿದೆ. ಕುರುಬ ಸಮಾಜ ಅವರಿಗೆ ಬೆಂಬಲವಾಗಿ ನಿಲ್ಲಬೇಕೆಂದರು. ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ತಾವು ಪಾದಯಾತ್ರೆ ನಡೆಸಿದಾಗ ಅಂದಿನ ಸಚಿವ ಆರ್.ಅಶೋಕ್ ಮನವಿ ಪಡೆದು ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಕೆಲವು ಅಂಕಿ ಅಂಶಗಳು ಬೇಕೆಂದು ಪ್ರಸ್ತಾವನೆ ಹಿಂದಕ್ಕೆ ಕಳಿಸಲಾಗಿತ್ತು. ಗುಲ್ಬರ್ಗ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಕುರುಬರ ಸಮಸ್ಯೆಗಳನ್ನು ಚರ್ಚಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದನ್ನೆ ದೊಡ್ಡ ಪ್ರಮಾದವನ್ನಾಗಿ ಮಾಡಿ ಕುರುಬರನ್ನು ಎಸ್ಟಿಗೆ ಸೇರಿಸಲು ಹುನ್ನಾರ ನಡೆಸುತ್ತಿದ್ದಾರೆಂಬ ಕೂಗು ಕೇಳಿ ಬಂದಿತು. ಕುರುಬರು ಹಾಲು ಮತಸ್ಥರೆಂದು ಸುಳ್ಳು ಜಾತಿ ಸರ್ಟಿಫಿಕೇಟ್‍ಗಳನ್ನು ತೆಗೆದುಕೊಳ್ಳುತ್ತಿದ್ದಾರೆಂಬ ಆಪಾದನೆ ನಮ್ಮ ಜನಾಂಗದ ಮೇಲಿದೆ ಎಂದರು. ಕಾಂತರಾಜ್ ಆಯೋಗದ ವರದಿಯನ್ನು 60 ಪ್ರಬಲ ಶಾಸಕರುಗಳು ವಿರೋಧಿಸಿದರು. ಲಿಂಗಾಯಿತ ಸಮುದಾಯಗಳಲ್ಲಿ ಅನೇಕ ಪಂಗಡಗಳಿವೆ. ಅವರ ಸಮಸ್ಯೆಗಳನ್ನು ಸರ್ಕಾರದ ಮೇಲೆ ಹಾಕಿ ಮುಖ್ಯಮಂತ್ರಿಗಳ ತೇಜೋವಧೆ ಮಾಡಲಾಗುತ್ತಿದೆ. ಸೆ.22ರಿಂದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಗಣತಿಯಲ್ಲಿ ಕಡ್ಡಾಯವಾಗಿ ಕುರುಬ ಎಂದು ನಮೂದಿಸಬೇಕು. ಪರ್ಯಾಯ ಜಾತಿಗಳ ಪದನಾಮಗಳನ್ನು ಬರೆಸಬಾರದು. ಈ ಕುರಿತು ಕರಪತ್ರಗಳನ್ನು ಮುದ್ರಿಸಿ ಪ್ರತಿ ಹಳ್ಳಿಗಳಲ್ಲಿ ಹಂಚುವ ಮೂಲಕ ಕುರುಬ ಜನಾಂಗದವರಲ್ಲಿ ಜಾಗೃತಿ ಮೂಡಿಸುವಂತೆ ಹೇಳಿದರು. ನಮ್ಮ ಮಠದಿಂದ ಕಾಗಿನೆಲೆ ಗ್ರಾಮೀಣಾಭಿವೃದ್ಧಿ ಕೋ-ಆಪರೇಟಿವ್ ಸೊಸೈಟಿ ಆರಂಭಿಸುತ್ತಿದ್ದೇವೆ. ಪ್ರತಿ ತಾಲೂಕಿನಲ್ಲಿ 150 ಷೇರು ಸಂಗ್ರಹಿಸುವ ಗುರಿಯಿದೆ. ಮಹಿಳೆಯರಿಗೆ ಒಂದು ಕೋಟಿ ರು.ಗಳವರೆಗೆ ಸಾಲ ನೀಡಿ ಆರ್ಥಿಕವಾಗಿ ಸ್ವಾವಲಂಭಿಯನ್ನಾಗಿಸುವ ಉದ್ದೇಶವಿದೆ. ಇದಕ್ಕೆ ಕುರುಬ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಜನಾಂಗದ ಮಕ್ಕಳ ಶಿಕ್ಷಣಕ್ಕೆ ಸಾಲ ನೀಡಲಾಗುವುದು. ಪ್ರತಿ ಜಿಲ್ಲೆಯಲ್ಲಿಯೂ ಹತ್ತು ಸಾವಿರ ಮಹಿಳೆಯರನ್ನು ಸಂಘಟಿಸಿ ರಾಜ್ಯದಲ್ಲಿ ಅತಿ ಎತ್ತರಕ್ಕೆ ತೆಗೆದುಕೊಂಡು ಹೋಗಬೇಕಿದೆ. 2019ರ ಕೋವಿಡ್ ಸಂದರ್ಭದಲ್ಲಿ ಎರಡು ಸಾವಿರ ಮಹಿಳೆಯರ ಗುಂಪುಗಳನ್ನು ರಚಿಸಿ ಮೂರರಿಂದ ನಾಲ್ಕು ಕೋಟಿ ರು.ಗಳ ಸಾಲ ಕೊಟ್ಟಿದ್ದೇವೆಂದು ತಿಳಿಸಿದರು.ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್ ಮಾತನಾಡಿ, ಸಂಘಕ್ಕೆ ಏಳೆಂಟು ಲಕ್ಷ ರು.ಗಳನ್ನು ಖರ್ಚು ಮಾಡಿ ವ್ಯವಸ್ಥಿತವಾಗಿಟ್ಟಿದ್ದೇವೆ. ಸಂಘಕ್ಕೆ ಬರುವ 24 ಸಾವಿರ ರು. ಬಾಡಿಗೆ ಹಣ ಎಲ್ಲಿಯೂ ಪೋಲಾಗಿಲ್ಲ. ಮಾಳಪ್ಪನಹಟ್ಟಿ ಸಮೀಪ ಒಂದು ಎಕರೆ ಜಾಗವಿದೆ. ಐವತ್ತರಿಂದ ಅರವತ್ತು ಕೋಟಿ ರು.ಗಳ ಆಸ್ತಿಯಿದೆ. ಹೈಟೆಕ್ ಸಮುದಾಯ ಭವನ, ಪಿ.ಜಿ. ಮಾಡಬೇಕೆಂದಿದ್ದೇವೆ. ನಾಲ್ಕೈದು ಕೋಟಿ ರು.ಗಳನ್ನು ಸಂಗ್ರಹಿಸಿ ಕಟ್ಟಡ ಕಟ್ಟಬೇಕಾಗಿರುವುದರಿಂದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಅನುದಾನ ಕೊಡಿಸುವಂತೆ ಸ್ವಾಮೀಜಿಯವರಲ್ಲಿ ಮನವಿ ಮಾಡಿದರು.ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಕುರುಬ ಎಂದು ಬರೆಸಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾಗಿರುವುದರಿಂದ ಯಾರು ಗಣತಿಯಿಂದ ವಂಚಿತರಾಗಬಾರದು. ಮನೆ ಮನೆಗೆ ಸಮೀಕ್ಷೆಗೆ ಬಂದಾಗ ನಿಖರವಾದ ಮಾಹಿತಿ ನೀಡುವಂತೆ ಸಮಾಜದ ಮುಖಂಡರುಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿಗೊಳಿಸುವಂತೆ ವಿನಂತಿಸಿದರು. ಕುರುಬ ಸಮಾಜದ ಮುಖಂಡರಾದ ಎಚ್.ಮಂಜಪ್ಪ, ಡಿ.ಉಮೇಶ್, ಲೋಕೇಶ್, ಸಜ್ಜನಕೆರೆ ರಾಜಣ್ಣ ವೇದಿಕೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಬಿಲ್‌ ಬಾಕಿದಾರರಿಗೆ ಶುಭ ಸುದ್ದಿ : ಬಡ್ಡಿ, ದಂಡ ಪೂರ್ಣ ಮನ್ನಾ।
ಡ್ರಗ್ಸ್‌ ದಂಧೆಯಲ್ಲಿ ಕಾಂಗ್ರೆಸ್‌ ನಿಕಟವರ್ತಿಗಳ ಕೈವಾಡ: ಶಾಸಕ ಅಶ್ವತ್ಥನಾರಾಯಣ