ನಾಯಕತ್ವದಿಂದ ಜವಾಬ್ದಾರಿ ಹೆಚ್ಚಳ: ಕೆಪಿಸಿಸಿ ಮಂಜುನಾಥ್‌

KannadaprabhaNewsNetwork |  
Published : Apr 24, 2026, 01:45 AM IST
ವಿಜೆಪಿ 23ವಿಜಯಪುರ ಪಟ್ಟಣದ ಪ್ರವಾಸಿಮಂದಿರದಲ್ಲಿ, ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಎಂ.ಸತೀಶ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಹಾಗೂ ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ವಿಜಯಪುರ: ಸಮಾಜದಲ್ಲಿ ಉತ್ತಮ ನಾಯಕರಾಗಿ ಬೆಳೆಯಲು ಸಹಕರಿಸಿದ ಜನರ ಏಳಿಗೆಗಾಗಿ ಸದಾ ಸಿದ್ಧರಾಗಿರಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಹೇಳಿದರು

ವಿಜಯಪುರ: ಸಮಾಜದಲ್ಲಿ ಉತ್ತಮ ನಾಯಕರಾಗಿ ಬೆಳೆಯಲು ಸಹಕರಿಸಿದ ಜನರ ಏಳಿಗೆಗಾಗಿ ಸದಾ ಸಿದ್ಧರಾಗಿರಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಹೇಳಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಪುರಸಭೆ ಸದಸ್ಯ ಎಂ.ಸತೀಶ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದಿಸಿ ಮಾತನಾಡಿ, ಸಮಾಜ ಸೇವೆ ಮಾಡುವಂತಹ ಅವಕಾಶಗಳನ್ನು ಸಿಕ್ಕಿದಾಗ ಅಂತಹ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು. ಸತೀಶ್ ಕುಮಾರ್ ಶಿಕ್ಷಣ ಸಂಸ್ಥೆಗಳ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗುವ ಜೊತೆಗೆ, ನೂರಾರು ಮಂದಿಗೆ ಉದ್ಯೋಗ ಅವಕಾಶಗಳನ್ನು ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದರು.

ಪುರಸಭೆ ಮಾಜಿ ಪುರಸಭೆ ಸದಸ್ಯ ಸಂಪತ್ ಕುಮಾರ್ ಮಾತನಾಡಿ, ಸತೀಶ್ ಕುಮಾರ್ ಅವರು ಶಿಕ್ಷಣ ಸಂಸ್ಥೆಗಳ ಜೊತೆಗೆ ಪುರಸಭೆಯಲ್ಲಿ ಜನಪ್ರತಿನಿಧಿಯಾಗಿ, ವಾರ್ಡುಗಳ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಎಸ್.ಭವ್ಯಾಮಹೇಶ್, ಪ್ರಥಮ ದರ್ಜೆ ಗುತ್ತಿಗೆದಾರರಾದ ರವೀಶ್, ವಿಜಯ ಬಸ್ ಮಾಲೀಕ ಗೀತೇಶ್, ಮಹಂತಿನ ಮಠದ ಅಧ್ಯಕ್ಷರಾದ ಪುನೀತ್ ಕುಮಾರ್, ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಗೌಸ್ ಖಾನ್, ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್, ಪುರಸಭೆ ಸದಸ್ಯರಾದ ಎಂ.ನಾರಾಯಣಸ್ವಾಮಿ, ಎಂ.ರಾಜಣ್ಣ, ಸೈಯದ್ ಎಕ್ಭಾಲ್, ಕೆ.ಎಂ.ಮಧು ಮಹೇಶ್, ಆರ್.ಮುನಿರಾಜು, ಮುನಿಚಿನ್ನಪ್ಪ, ಕೆ.ಮುನಿರಾಜು, ಮುನಿರಾಜು, ಹೆಚ್.ಟಿ.ನಾರಾಯಣಸ್ವಾಮಿ, ಎಜಾಜ್ ಅಹಮದ್, ಅಪ್ಜಲ್ ಪಾಷ, ಆರ್.ಎಂ.ಸಿಟಿ.ಮಂಜುನಾಥ್, ನಯಾಜ್ ಪಾಷಾ, ಎಂ.ವೇಣುಗೋಪಾಲ್, ಮುನಿನಾರಾಯಣಪ್ಪ, ಮುನ್ನಾಖಾನ್, ಜಗದೀಶ್, ರಮೇಶ್, ಹರೀಶ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಿಗ್ರಾಮ, ಕೆ.ಆರ್‌. ನಗರ ತಾಲೂಕಿಗೆ ಶೇ. 92.13 ಫಲಿತಾಂಶ
ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡಿ