ಗಾಂಧಿನಗರದ ಅಂಡರ್‌ಪಾಸ್ ಬಳಿ ಸೋರುತ್ತಿರುವ ಹೇಮಾವತಿ ನೀರಿನ ಪೈಪ್

KannadaprabhaNewsNetwork |  
Published : Jan 26, 2024, 01:47 AM IST
 | Kannada Prabha

ಸಾರಾಂಶ

ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನಿರ್ಮಿಸಿರುವ ಅಂಡರ್‌ಪಾಸ್ ಮೇಲ್ಬಾಗದಲ್ಲಿ ನಗರಸಭೆ ವತಿಯಿಂದ ಕೆ.ಆರ್‌. ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಪೈಪ್ ಅಳವಡಿಸಿದ್ದು ಬಹಳ ದಿನಗಳಿಂದ ಇಲ್ಲಿ ನೀರು ಸೋರಿಕೆಯಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ನಿತ್ಯ ಸಾವಿರಾರು ಲೀಟರ್ ನೀರು ಪೋಲಾಗುತ್ತಿದೆ ಎಂದು ಸಾರ್ವನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನಿರ್ಮಿಸಿರುವ ಅಂಡರ್‌ಪಾಸ್ ಮೇಲ್ಬಾಗದಲ್ಲಿ ನಗರಸಭೆ ವತಿಯಿಂದ ಕೆ.ಆರ್‌. ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಪೈಪ್ ಅಳವಡಿಸಿದ್ದು ಬಹಳ ದಿನಗಳಿಂದ ಇಲ್ಲಿ ನೀರು ಸೋರಿಕೆಯಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ನಿತ್ಯ ಸಾವಿರಾರು ಲೀಟರ್ ನೀರು ಪೋಲಾಗುತ್ತಿದೆ ಎಂದು ಸಾರ್ವನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿನಗರದಲ್ಲಿರುವ ನೀರು ಶುದ್ಧೀಕರಣ ಘಟಕದಿಂದ ರೈಲ್ವೆ ಅಂಡರ್ ಪಾಸ್ ಮೇಲ್ಬಾಗ ಕೆ.ಆರ್‌.ಬಡಾವಣೆಗೆ ನೀರು ಸರಬರಾಜು ಮಾಡಲು ಪೈಪ್ ಅಳವಡಿಸಲಾಗಿರುವ ಪೈಪ್‌ನಿಂದ ನೀರು ಸೋರಿಕೆಯಾಗಿ ಅಂಡರ್‌ಪಾಸ್ ಕೆಳಭಾಗದಲ್ಲಿ ಕೆರೆಯಂತಾಗಿದೆ. ನೀರಿನ ಪೈಪ್ ಸೋರಿಕೆಯಿಂದ ವಾಹನ ಸವಾರರಿಗೆ ಓಡಾಡಲು ಸಾಕಷ್ಟು ತೊಂದೆಯಾಗುತ್ತಿದೆ. ಈ ಬಗ್ಗೆ ಹಲವು ದಿನಗಳಿಂದಲೂ ಸಾರ್ವಜನಿಕರು ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಸಾರ್ವಜನಿಕರ ಬಹಳವರ್ಷಗಳ ಬೇಡಿಕೆಯಿಂದ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ಅಂಡರ್ ಪಾಸ್ ನಿರ್ಮಿಸಿದ್ದರೂ ಅಂಡರ್‌ಪಾಸ್‌ನಲ್ಲಿ ತೆರಳಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಅಂಡರ್‌ಪಾಸ್ ಮೂಲಕ ಸುಕ್ಷೇತ್ರಗಳಾದ ಕೆರೆಗೋಡಿ-ರಂಗಾಪುರ, ದಸರೀಘಟ್ಟ ಸೇರಿದಂತೆ ಹಲವಾರು ಹಳ್ಳಿಗಳಿಗೆ ಸಾವಿರಾರು ಜನರು, ವಾಹನಗಳು ಓಡಾಡುತ್ತವೆ. ಎಪಿಎಂಸಿ, ಗಾಂಧಿನಗರ ಬಾಗದ ಬಡಾವಣೆಗಳ ಜನರು ಸಹ ಇದೇ ರಸ್ತೆಯನ್ನು ಅವಲಂಭಿಸಿದ್ದು ನೀರು, ಕೆಸರು ತುಂಬಿರುವುದರಿಂದ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆ ಗಮನಕ್ಕೆ ತಂದಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ನೀರಿನ ಪೈಪ್ ರಿಪೇರಿಯಾಗಿಲ್ಲ. ಹಾಗಾಗಿ ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ನಿತ್ಯ ಪೋಲಾಗುತ್ತಿರುವ ನೀರನ್ನು ಉಳಿಸುವ ಮೂಲಕ ಅಂಡರ್ ಪಾಸ್‌ನಲ್ಲಿ ಓಡಾಡುವವರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರ ಪರವಾಗಿ ಸಾಮಾಜಿಕ ಕಾರ್ಯಕರ್ತ ಟೈಲರ್ ಟಿ.ಎಸ್. ಹರೀಶ್ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌